ಯೋಜನೆ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಕ್ಷೇತ್ರದಿಂದ ಆಗಮಿಸಿದ್ದ ನಿಯೋಗ
ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು. ಕೂಡಲೇ ದೂರವಾಣಿ ಮೂಲಕ ಯಡಿಯೂರಪ್ಪ
ಅವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, 2018-19 ನೇ ಸಾಲಿನ ಬಜೆಟ್ನಲ್ಲಿ 525 ಕೋಟಿ
ರೂ. ವೆಚ್ಚದ ಕೆರೂರು ಏತ ನೀರಾವರಿ ಯೋಜನೆ ಘೋಷಣೆಯಾಗಿ 300 ಕೋಟಿ ರೂ.ಗಳ ಅನುದಾನ
ಮಂಜೂರು ಮಾಡಲಾಗಿತ್ತು. ಆದರೆ, ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ. ಮುಂಬರುವ ಬಜೆಟ್
ನಲ್ಲಿ ಯೋಜನೆ ಜಾರಿಗೆ ಅನುದಾನ ಮಂಜೂರು ಮಾಡಬೇಕು ಎಂದರು.
0 Comments