Ticker

6/recent/ticker-posts

Ad Code

Responsive Advertisement

ಜಾರಕಿಹೊಳಿ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

 ಡಿಕೆ ಶಿವಕುಮಾರ್ ಮೇಲೆ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನ ಖಂಡಿಸಿ ಮತ್ತು ಅವರ ಬಂಧನವಾಗಬೇಕೆಂದು ಆಗ್ರಹಿಸಿ ಬೆಂಗಳೂರಿನ ಕೆಲ ಕಡೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೌರ್ಯ ಸರ್ಕಲ್ ಹಾಗೂ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಬಳಿ ಪ್ರತಿಭಟನೆಗಳು ನಡೆದಿವೆ.


ಮೌರ್ಯ ಸರ್ಕಲ್​ನಲ್ಲಿ ನೂರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಮೇಶ್ ಜಾರಕಿಹೊಳಿ ಅವರನ್ನ ಬಂಧಿಸಬೇಕು ಹಾಗೂ ಕೋರ್ಟ್​ನಿಂದ ಸುದ್ದಿ ಪ್ರಸಾರಕ್ಕೆ ತಡೆ ತಂದ ಆರು ಸಚಿವರು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರಮೇಶ್ ಜಾರಕಿಹೊಳಿ ಗೂಂಡಾ, ಇದು ಸಿಡಿ ಸರ್ಕಾರ ಎಂದು ಕೈ ಕಾರ್ಯಕರ್ತರು ಘೋಷಣೆ ಕೂಗಿದರು. ಕಾಂಗ್ರೆಸ್​ನ ಯುವ ಘಟಕದ ಮುಖಂಡರಾದ ಮಿಥುನ್ ರೈ ಮತ್ತು ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಬೈಕ್ ಮೂಲಕ ಆಗಮಿಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಬ್ಯಾರಿಕೇಡ್ ತಳ್ಳಿ ಕಬ್ಬನ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಡೌನ್ ಡೌನ್ ಬಿಜೆಪಿ ಎಂಬಿತ್ಯಾದಿ ಘೋಷಣೆಗಳನ್ನ ಕೂಗಿ ಠಾಣೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ತಡೆಯಲು ಪೊಲೀಸರು ಹರಸಾಹಸ ನಡೆಸಬೇಕಾಯಿತು. ಈ ವೇಳೆ ನೂರಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್​ನಲ್ಲಿ ಕರೆದೊಯ್ದರು.



ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮೊಹಮ್ಮದ್ ನಲಪಾಡ್, ಪ್ರಕರಣ ಬೆಳಕಿಗೆ ಬಂದು 24 ದಿನವಾದರೂ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸಿಲ್ಲ. ಒಬ್ಬ ಸಾಮಾನ್ಯ ವ್ಯಕ್ತಿ ಹೀಗೆ ಮಾಡಿದಿದ್ದರೆ ಬಂಧನ ಆಗಿರುತಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.ವಿಡಿಯೋದಲ್ಲಿರುವ ಸಂತ್ರಸ್ತ ಮಹಿಳೆ ಇಂದು ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲಿದ್ದು, ಆ ಕಡೆ ಎಲ್ಲರ ಗಮನ ಹರಿದಿದೆ. ಯುವತಿ ಈಗಾಗಲೇ ತನ್ನ ವಕೀಲರ ಮೂಲಕ ದೂರು ದಾಖಲು ಮಾಡಿದ್ದಾರೆ. 27 ದಿನಗಳ ಹಿಂದೆ ಸಿಡಿ ಪ್ರಕರಣ ಹೊರಬಂದ ಬಳಿಕ ರಮೇಶ್ ಜಾರಕಿಹೊಳಿ ನೀಡಿದ ಪ್ರತ್ಯಾರೋಪವಿರುವ ಪತ್ರದ ಆಧಾರದ ಮೇಲೆ ಈಗಾಗಲೇ ಪ್ರಕರಣ ದಾಖಲಾಗಿದೆ. ಎಸ್​ಐಟಿಯಿಂದ ವಿಚಾರಣೆ ನಡೆಯುತ್ತಿದೆ. ಯುವತಿ ನೀಡಿರುವ ದೂರನ್ನೂ ಕೂಡ ಎಸ್​ಐಟಿಗೆ ವರ್ಗಾವಣೆ ಮಾಡಲಾಗಿದೆ. ಈಗ ಎರಡೂ ಪ್ರಕರಣಗಳನ್ನ ಎಸ್​ಐಟಿ ತನಿಖೆ ನಡೆಸುತ್ತಿದೆ.

ಸಿಡಿ ಪ್ರಕರಣ ಬೆಳಕಿಗೆ ಬಂದ ನಂತರದಿಂದಲೂ ಅಜ್ಞಾತ ಸ್ಥಳದಲ್ಲಿರುವ ಯುವತಿ ಇಂದು ಮ್ಯಾಜಿಸ್ಟ್ರೇಟ್ ಮುಂದೆ ಯಾವ ಹೇಳಿಕೆ ದಾಖಲಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಹಾಗೆಯೇ, ಬೆಳಗ್ಗೆ 10 ಗಂಟೆಯಿಂದಲೇ ರಮೇಶ್ ಜಾರಕಿಹೊಳಿ ಅವರನ್ನು ಎಸ್​ಐಟಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆ ಸಂಜೆಯೇ ಅವರ ವಿಚಾರಣೆ ನಡೆಸಬೇಕಿತ್ತು. ಆದರೆ, ಅವರು ಸಿಗದ ಕಾರಣ ಇಂದು ಆಡುಗೋಡಿಯ ಟೆಕ್ನಿಕಲ್ ಸೆಲ್​ನಲ್ಲಿ ಗೋಕಾಕ್ ಶಾಸಕರನ್ನ ವಿಚಾರಣೆ ಮಾಡುತ್ತಿದ್ದಾರೆ.

Post a Comment

0 Comments

Ad Code

Responsive Advertisement