Ticker

6/recent/ticker-posts

Ad Code

Responsive Advertisement

ಬೆಂಗಳೂರು-ಮಂಗಳೂರು ನಡುವೆ 3 ರೈಲು

 ಬೆಂಗಳೂರು- ಮಂಗಳೂರು ನಡುವೆ ಏಪ್ರಿಲ್ 10ರಿಂದ 3 ಎಕ್ಸ್‌ಪ್ರೆಸ್ ರೈಲುಗಳು ಸಂಚಾರ ನಡೆಸಲಿವೆ.  ಪ್ರತಿದಿನ 3 ಎಕ್ಸ್‌ಪ್ರೆಸ್ ರೈಲುಗಳು ಕುಣಿಗಲ್, ಶ್ರವಣಬೆಳಗೊಳ ಮತ್ತು ಹಾಸನ ಮಾರ್ಗವಾಗಿ ಸಂಚಾರ ನಡೆಸಲಿವೆ. ಹಾಸನ-ಶ್ರವಣಬೆಳಗೊಳ-ಚಿಕ್ಕಬಣಾವರ ನಡುವೆ ನೂತನ ರೈಲು ಮಾರ್ಗ ನಿರ್ಮಾಣವಾಗಿತ್ತು. 


ಪ್ರತಿದಿನ ರಾತ್ರಿ 9.30ಕ್ಕೆ ಬೆಂಗಳೂರಿನ ಮೆಜೆಸ್ಟಿಕ್‌ನಿಂದ ಹೊರಡುವ ರೈಲು. 12.30ಕ್ಕೆ ಹಾಸನ ತಲುಪಲಿದೆ. ಮರುದಿನ ಬೆಳಗ್ಗೆ 7.50ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣ ತಲುಪಲಿದೆ. ಮಂಗಳೂರಿನಿಂದ ಬೆಳಗ್ಗೆ 8.50ಕ್ಕೆ ಹೊರಡುವ ರೈಲು ಸಂಜೆ 7.30ಕ್ಕೆ ಬೆಂಗಳೂರಿಗೆ ಬಂದು ತಲುಪಲಿದೆ.


ಈ ಮೂರು ರೈಲುಗಳ ಜೊತೆ ಬೆಂಗಳೂರು-ಹಾಸನ ನಡುವೆ ಸಂಚರಿಸುತ್ತಿರುವ ಡೆಮು ರೈಲು ಜೊತೆಗೆ ಮತ್ತೆರಡು ರೈಲುಗಳು ಸಂಚಾರ ನಡೆಸಲಿವೆ. ಸೊಲ್ಹಾಪುರ-ಹಾಸನ ನಡುವೆ ಪ್ರತಿದಿನ ಸಂಚಾರ ನಡೆಸುವ ರೈಲು ಸಹ ಏಪ್ರಿಲ್ 10 ರಿಂದ ಆರಂಭವಾಗುತ್ತಿದೆ.

ಬೆಂಗಳೂರು ನಗರದ ಯಶವಂತಪುರದಿಂದ ಪ್ರತಿದಿನ ಬೆಳಗ್ಗೆ 7.10ಕ್ಕೆ ಹೊರಡುವ ಎಕ್ಸ್‌ಪ್ರೆಸ್ ರೈಲು 10.05ಕ್ಕೆ ಹಾಸನ ತಲುಪಲಿದೆ. ಹಾಸನದಿಂದ ಹೊರಟ ರೈಲು ಸಂಜೆ 4.55ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ವಾರದಲ್ಲಿ 4 ದಿನ ಮಂಗಳೂರು ಜಂಕ್ಷನ್ ಮತ್ತು 3 ದಿನ ಕಾರವಾರದ ತನಕ ಈ ರೈಲು ಸಂಚಾರ ನಡೆಸಲಿದೆ.

ರೈಲಿನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬೆಂಗಳೂರು-ಮಂಗಳೂರು ನಡುವೆ ಶ್ರವಣಬೆಳಗೊಳ ಮಾರ್ಗವಾಗಿ ರಾತ್ರಿ 2 ರೈಲು, ಬೆಳಗ್ಗೆ 1 ರೈಲು ಸಂಚಾರ ನಡೆಸಲಿದೆ. ಬೆಂಗಳೂರು, ಮಂಗಳೂರು, ಹಾಸನ ಜಿಲ್ಲೆಗಳ ನಡುವೆ ಸಂಚಾರ ನಡೆಸುವವರಿಗೆ ಸಹಾಯಕವಾಗಲಿದೆ.

ವಾರದಲ್ಲಿ 4 ದಿನ ಕುಣಿಗಲ್, ಶ್ರವಣಬೆಳಗೊಳ ಹಾಸನ ಮಾರ್ಗವಾಗಿ, ವಾರದಲ್ಲಿ ಮೂರು ದಿನ ಮಂಡ್ಯ, ಮೈಸೂರು, ಹಾಸನ ಮಾರ್ಗವಾಗಿ ಸಂಚಾರ ನಡೆಸುತ್ತಿದ್ದ ಎಕ್ಸ್‌ಪ್ರೆಸ್ ರೈಲು ಏಪ್ರಿಲ್ 10ರಿಂದ ವಾರದ 7 ದಿನವೂ ಬೆಂಗಳೂರಿನಿಂದ ಕುಣಿಗಲ್, ಶ್ರವಣಬೆಳಗೊಳ, ಹಾಸನ ಮಾರ್ಗವಾಗಿ ಮಂಗಳೂರು ಸೆಂಟ್ರಲ್‌ಗೆ ಸಂಚಾರ ನಡೆಸಲಿದೆ.

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ (ಮೆಜೆಸ್ಟಿಕ್‌)ನಿಂದ ಸಂಜೆ 6.40ಕ್ಕೆ ಹೊರಡುವ ರೈಲು 9.30ಕ್ಕೆ ಹಾಸನವನ್ನು ತಲುಪಲಿದೆ. ಮರುದಿನ ಬೆಳಗ್ಗೆ 8.35ಕ್ಕೆ ಕಾರವಾರ ತಲುಪಲಿದೆ. ಈ ರೈಲು ಮಂಗಳೂರು ನಿಲ್ದಾಣಕ್ಕೆ ಹೋಗದೆ ಪಡೀಲ್ ರೈಲು ನಿಲ್ದಾಣದಿಂದ ಕಾರವಾರಕ್ಕೆ ಸಂಚರಿಸಲಿದೆ. ಕಾರವಾರದಿಂದ ಸಂಜೆ 6.30ಕ್ಕೆ ಹೊರಡುವ ರೈಲು ಮರುದಿನ ಬೆಳಗ್ಗೆ 7 ಗಂಟೆಗೆ ಬೆಂಗಳೂರಿನ ಮೆಜೆಸ್ಟಿಕ್ ತಲುಪಲಿದೆ.










Post a Comment

0 Comments

Ad Code

Responsive Advertisement