ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಇದು ಮೊದಲ ಸಲ ಕ್ಯಾಬಿನೆಟ್ ಸಚಿವರು ಸಿಎಂ ವಿರುದ್ಧ ಆರೋಪಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ. ಸಿಎಂ ವಿರುದ್ಧ ರಾಜ್ಯಪಾಲರಿಗೆ ಈಶ್ವರಪ್ಪ ದೂರು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, 1,200 ಕೋಟಿ ಹಗರಣದ ಆರೋಪ ಮಾಡಿದ್ದಾರೆ. ತಿಪ್ಪೆ ಸಾರಿಸೋದು ಏನಿಲ್ಲಾ, ಸಿಎಂ ರಿಸೈನ್ ಮಾಡಬೇಕು. ಇಲ್ಲ ಆ ಸಚಿವರ ರಾಜೀನಾಮೆ ಪಡೆಯಬೇಕು. ಒಳಗೆ ಏನೇನು ಇದೆಯೋ, ಸಿಎಂ ರಾಜೀನಾಮೆ ಕೊಡಲಿ. ಇಲ್ಲಾ ಈಶ್ವರಪ್ಪನವರನ್ನ ತೆಗೆದು ಹಾಕಲಿ. ಕಾಂಗ್ರೆಸ್ ಇದರ ವಿರುದ್ದ ಹೋರಾಟ ಮಾಡುತ್ತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
0 Comments