Ticker

6/recent/ticker-posts

Ad Code

Responsive Advertisement

ರೆಮಿಡಿಸ್ವಿಯರ್ ಸರಿಯಾಗಿ ಪೂರೈಕೆಯಾಗುವಂತೆ ನೋಡಿಕೊಳ್ಳಿ: ಎಚ್ಚರಿಕೆ ನೀಡಿದ ಸಿಎಂ


ಬೆಂಗಳೂರು,ಮೇ.4(ಯುಎನ್ಐ)ಒಂದುಕಡೆ ಕೊರೊನಾ ವೈರಸ್ ಎರಡನೇ ಅಲೆ ಅಟ್ಟಹಾಸ ಮೆರೆಯುತ್ತಿದ್ದರೆ ಅದಕ್ಕೆ ಅಗತ್ಯವಾಗಿರುವ ರೆಮಿಡಿಸ್ವಿಯರ್ ಇಂಜೆಕ್ಷನ್ ಕೊರತೆಯಾಗುತ್ತಿದೆ.ಅಲ್ಲದೇ ಕಾಳಸಂತೆಯಲ್ಲಿ ರೆಮಿಡಿಸ್ವಿಯರ್ ಮಾರಾಟವಾಗುತ್ತಿದ್ದು,ಈ ಬಗ್ಗೆ ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ ನೀಡಿದರು.

ಅಧಿಕೃತ ನಿವಾಸ ಕಾವೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ,ರಾಜ್ಯದಲ್ಲಿ ರೆಮಿಡಿಸಿವಿರ್ ಬ್ಲಾಕ್ ಮಾರಾಟದ ಬಗ್ಗೆ ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ ನೀಡಿ,ರಾಜ್ಯದಲ್ಲಿ ಇಂದು ಕೊರೊನಾ ಸೋಂಕು ವ್ಯಾಪಕವಾಗಿದೆ.ಇದು ಅತ್ಯಂತ ಕ್ಲಿಷ್ಟಕರವಾದ ಸಂದರ್ಭ.ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಮ್ಮ ಜೊತೆಗೆ ನಿಂತಿದೆ.ಆದರೆ ಕೆಲ ಅಧಿಕಾರಿಗಳು ರೆಮಿಡಿಸಿವಿರ್ ಡೋಸ್‌ಗಳನ್ನು ಅನ್ಯ ರಾಜ್ಯಗಳಿಗೆ ಕಳುಹಿಸುತ್ತಿದ್ದಾರೆ ಎಂಬ ಮಾಹಿತಿ ನಮಗೆ ಬಂದಿದೆ.ಈ ಬಗ್ಗೆ ತನಿಖೆ ಮಾಡಿಸುತ್ತೇನೆ.ಇದರಲ್ಲಿ ಯಾರನ್ನು ಕಾಪಾಡುವ ಮಾತಿಲ್ಲ.ನಾನು ಇದನ್ನು ತನಿಖೆಗೆ ವಹಿಸಿದರೇ, ಸತ್ಯ ಹೊರ ಬರುತ್ತದೆ.ಯಾವುದೇ ಅಧಿಕಾರಿಗಳು ಇದರಲ್ಲಿ ಭಾಗಿಯಾದ್ರೆ ಪರಿಣಾಮ ಭೀಕರವಾಗಿರಲಿದೆ.ಇದನ್ನೇ ಎಚ್ಚರಿಕೆ ಎಂದು ಭಾವಿಸಬೇಕು.ಮುಂದೆ ಜನರ ಸೇವೆ ಬದ್ಧರಾಗಿರಬೇಕು ಎಂದು ಯಡಿಯೂರಪ್ಪ ಹೇಳಿದರು.

ಇಲ್ಲವಾದರೆ ತನಿಖೆ ಮಾಡಿಸಿ ಎಲ್ಲವನ್ನೂ ಬಯಲಿಗೆಳೆಯುತ್ತೇನೆ‌.ಯಾವುದೇ ಅಧಿಕಾರಿಗಳನ್ನು ಕಾಪಾಡುವುದಿಲ್ಲ.ಎಚ್ಚರಿಕೆಯಿಂದ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಯಡಿಯೂರಪ್ಪ ಸೂಚಿಸಿದರು.

Post a Comment

0 Comments

Ad Code

Responsive Advertisement