ನವದೆಹಲಿ: ಕೋವಿಡ್ ಬಿಕ್ಕಟ್ಟಿನಿಂದ ಸಂಕಷ್ಟದಲ್ಲಿರುವ ದೆಹಲಿಯ 72 ಲಕ್ಷ ಪಡಿತರ ಚೀಟಿದಾರರಿಗೆ ಎರಡು ತಿಂಗಳ ಕಾಲ ಉಚಿತವಾಗಿ ಪಡಿತರ ಹಾಗೂ ಆಟೊ–ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ರೂಗಳ ಅರ್ಥಿಕ ನೆರವು ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ.
ಕೋವಿಡ್ ಸೋಂಕು ಪ್ರಸರಣ ತಡೆಗೆ ದೆಹಲಿಯಲ್ಲಿ ಎರಡು ತಿಂಗಳವರೆಗೆ ಲಾಕ್ಡೌನ್ ಜಾರಿಗೊಳಿಸುವುದಿಲ್ಲ. ಈಗ ದೆಹಲಿಯ ಪರಿಸ್ಥಿತಿ ಸುಧಾರಿಸುವ ವಿಶ್ವಾಸವಿದೆ. ಲಾಕ್ಡೌನ್ ಜಾರಿಗೊಳಿಸುವ ಅಗತ್ಯವೂ ಬರುವುದಿಲ್ಲ` ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಕಳೆದ ವರ್ಷದ ಲಾಕ್ಡೌನ್ ಸಮಯದಲ್ಲಿ ದೆಹಲಿ ಸರ್ಕಾರ 1.56 ಲಕ್ಷ ಆಟೊ ಮತ್ತು ಟ್ಯಾಕ್ಸಿ ಚಾಲಕರಿಗೆ ತಲಾ 5ಸಾವಿರ ರೂ.ಗಳ ಆರ್ಥಿಕ ನೆರವನ್ನು ಇಲ್ಲಿ ಸ್ಮರಿಸಬಹುದು. ಈ ವರ್ಷವೂ ಅದೇ ರೀತಿ ಅವರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ` ಎಂದು ಕೇಜ್ರಿವಾಲ್ ಹೇಳಿದರು.
ಕೇಂದ್ರಗಳನ್ನು ತೆರೆಯಲು ಯೋಜನೆ ರೂಪಿಸಿದ್ದಾರೆ ಎಂದು ಹೇಳಲಾಗುತ್ತಿದೆ.


0 Comments