ಬೆಂಗಳೂರು : ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಗಳು ಮುಂದೂಡಲಾಗಿದ್ದು, ಇದೀಗ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ರಾಜ್ಯದಲ್ಲಿ ಜುಲೈನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಸಿದ್ಧೆ ನಡೆಸಲಾಗುತ್ತಿದೆ. ಜುಲೈ ಕೊನೆ ವಾರ ಅಥವಾ ಆಗಸ್ಟ್ ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯುವ ಸಾಧ್ಯತೆಳಿವೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಪ್ರಶ್ನೆ ಪತ್ರಿಕೆ ಸಿದ್ಧತೆ, ಪರೀಕ್ಷಾ ಕೇಂದ್ರಗಳ ಸಿದ್ಧತೆ ಬಹುತೇಕ ಮುಕ್ತಾಯವಾಗಿದ್ದು, ಮೊದಲಿಗೆ ದ್ವಿತೀಯ ಪಿಯುಸಿ ಪರೀಕ್ಷೆಯ ನಂತರ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗುತ್ತದೆ ಎನ್ನಲಾಗಿದೆ.

0 Comments