'KGF' ಸಿನಿಮಾ ಮೂಲಕ ದೇಶ ವಿದೇಶದಲ್ಲಿ ಖ್ಯಾತಿಗಳಿಸಿರುವ ಖ್ಯಾತ ನಿರ್ಮಾಪಕ ವಿಜಯ್ ಕಿರಗಂದೂರು ಇದೀಗ ಕೊರೊನಾ ಸಂಕಷ್ಟದ ನೆರವಿಗೆ ಧಾವಿಸಿದ್ದಾರೆ. ತಮ್ಮ ಹುಟ್ಟೂರಾದ ಮಂಡ್ಯದ ಜನರ ನೆರವಿಗೆ ನಿಂತಿದ್ದಾರೆ ವಿಜಯ್ ಕಿರಗಂದೂರು. ಈಗಾಗಲೇ ಸಾಕಷ್ಟು ಸೆಲೆಬ್ರಿಟಿಗಳು ಸಹಾಯಹಸ್ತ ಚಾಚಿದ್ದಾರೆ. ಇತ್ತೀಚಿಗಷ್ಟೆ ನಟ ಶ್ರೀಮರಳಿ, ಉಪೇಂದ್ರ, ಶೋಭರಾಜ್ ಸೇರಿದಂತೆ ಅನೇಕರು ನೆರವು ನೀಡಿದ್ದಾರೆ. ಇದೀಗ ನಿರ್ಮಾಪಕ ವಿಜಯ್ ಕಿರಗಂದೂರು ಮಂಡ್ಯದ ಕೊರೊನಾ ಸೋಂಕಿತರಿಗೆ ಅನುಕೂಲವಾಗುವಂತೆ, 500 ಎಲ್ ಪಿ ಎಂ ಸಾಮರ್ಥ್ಯದ ಆಕ್ಸಿಜನ್ ಘಟಕ ಅಥವಾ ಸಕಲ ವ್ಯವಸ್ಥೆಯನ್ನು ಒಳಗೊಂಡ 50 ಐಸಿಯು ಬೆಡ್ ವ್ಯವಸ್ಥೆ ಮಾಡಿಸಿಕೊಡಲು ತೀರ್ಮಾನಿಸಿದ್ದಾರೆ.
ಈ ಬಗ್ಗೆ ತಮ್ಮ ನಿರ್ಮಾಣದ ಹೊಂಬಾಳೆ ಗ್ರೂಪ್ ಮೂಲಕ ಹುಟ್ಟೂರಿಗೆ ನೆರವಾಗುವುದಾಗಿ ಪತ್ರ ಬರೆದಿದ್ದಾರೆ. ಈ ಸೌಲಭ್ಯವನ್ನು ಮಂಡ್ಯದ ಜನರು ಉಪಯೋಗಿಸಿಕೊಳ್ಳುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

0 Comments