ಬೆಂಗಳೂರು, ಜೂನ್ 24 (ಕರ್ನಾಟಕ ವಾರ್ತೆ): ಕೋವಿಡ್-19 ಎರಡನೇ ಅಲೆ ಹಿನ್ನೆಲೆಯಲ್ಲಿ ಸೋಂಕು ಹರಡುವುದು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಮಕ್ಕಳ ರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಿದ್ದು, ಮಕ್ಕಳ ರಕ್ಷಣೆ ಕಾರ್ಯಕ್ಕೆ ಸ್ವಯಂ ಸೇವಕರ ಅವಶ್ಯಕತೆಯಿರುತ್ತದೆ, ಹಾಗಾಗಿ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಡಿಯಲ್ಲಿ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಆಸಕ್ತಿ ಇರುವ ವ್ಯಕ್ತಿಗಳು ನಿರ್ದೇಶನಾಲಯದ ವೆಬ್ಸೈಟ್: iಛಿಠಿs.ಞಚಿಡಿಟಿಚಿಞಚಿಞಚಿ.gov.iಟಿ ನಲ್ಲಿ ಅರ್ಜಿ ಸಲ್ಲಿಸ ಬಹುದಾಗಿದೆ ಎಂದು ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 Comments