ರಾಜ್ಯ ಸರ್ಕಾರವು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಪ್ರತಿ ವರ್ಷ ಜೂನ್ 27 ರಂದು ಆಚರಿಸಲಾಗುತ್ತಿದೆ. ಅದರಂತೆ 512ನೇ ನಾಡ ಪ್ರಭು ಕೆಂಪೇಗೌಡರ ಜಯಂತಿಯ ಅಂಗವಾಗಿ ಕೋವಿಡ್ ಹಿನ್ನಲೆಯಲ್ಲಿ ಸರಳವಾಗಿ ಬಿಬಿಎಂಪಿಯ ಕೇಂದ್ರ ಕಛೇರಿಯ ಮುಂಭಾಗದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಹಾಗೂ ಕೆಂಪೇಗೌಡರ ಸೊಸೆ ಮಹಾತ್ಯಾಗಿ ಲಕ್ಷೀದೇವಿ ಪ್ರತಿಮೆಗೆ ಇಂದು ಮಾನ್ಯ ಆಡಳಿತಗಾರ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ಗೌರವ್ ಗುಪ್ತ ರವರು ಮಾಲಾರ್ಪಣೆ ಹಾಗೂ ಪುಷ್ಪಾರ್ಪಣೆ ನೆರವೇರಿಸಿದರು.
ತದನಂತರ ನಾಡಪ್ರಭು ಕೆಂಪೇಗೌಡರ ಸೊಸೆ ಮಹಾತ್ಯಾಗಿ ಲಕ್ಷ್ಮೀದೇವಿ ರವರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಪಣೆ ನೆರವೇರಿಸಿದರು.
ವಿಶೇಷ ಆಯುಕ್ತರುಗಳಾದ ಶ್ರೀಮತಿ ತುಳಸಿ ಮದ್ದಿನೇನಿ, ಡಿ.ರಂದೀಪ್, ದಯಾನಂದ್, ಡಾ. ಹರೀಶ್ ಕುಮಾರ್, ಮನೋಜ್ ಜೈನ್, ಬಸವರಾಜು, ರವೀಂದ್ರ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.*






0 Comments