ಕಂದಾಯ ಸಚಿವ ಆರ್ ಅಶೋಕ ಅವರು ಮುಖ್ಯಮಂತ್ರಿಗಳೊಂದಿಗೆ ಬೆಂಗಳೂರು ಕಂಟೋನ್ಮೆಂಟ್ ನಿಂದ ಹೀಲಲಿಗೆ ಪ್ರಯಾಣಿಸುವ ಮೂಲಕ ಬೆಂಗಳೂರು ಉಪನಗರ ರೈಲು ಯೋಜನೆ ಹಾಗೂ ದ್ವಿಪಥ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.ಕರ್ನಾಟಕ ಸರ್ಕಾರ ಹಾಗೂ ರೈಲ್ವೆ ಮಂತ್ರಾಲಯ ಜಂಟಿ ಸಹಯೋಗದಲ್ಲಿ ಕೆ-ಆರ್ಐಡಿಇ ಈ ಉಪನಗರ ಯೋಜನೆಯನ್ನು ಕಾರ್ಯಗತಗೊಳಿಸಲಿದೆ.
ಬಿಎಸ್ ಆರ್ ಪಿಯು 148ಕಿ.ಮೀ. ಅಂತರದಲ್ಲಿ 4 ಕಾರಿಡಾರ್ ಗಳನ್ನ ಹೊಂದಿದೆ. ಅವುಗಳು,
1. ಕೆಎಸ್ ಆರ್ ಬೆಂಗಳೂರು ನಗರ - ದೇವನಹಳ್ಳಿ (ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ) (41.40ಕಿ.ಮೀ.)
2. ಬೈಯಪ್ಪನಹಳ್ಳಿ - ಚಿಕ್ಕಬಾಣಾವರ (25ಕಿ.ಮೀ.)
3. ಕೆಂಗೇರಿ - ವೈಟ್ ಫಿಲ್ಡ್ (35.52ಕಿ.ಮೀ.)
4. ಹೀಲಲಿಗೆ (ಚಂದಾಪುರ) - ರಾಜನಕುಂಟೆ (46.24ಕಿ.ಮೀ.)
ನಾಲ್ಕು ಕಾರಿಡಾರ್ ಗಳಲ್ಲಿ ಕಾರಿಡಾರ್ - (ಬೈಯಪ್ಪನಹಳ್ಳಿ-ಚಿಕ್ಕಬಾಣಾವರ) ಮತ್ತು ಕಾರಿಡಾರ್ - 4 (ಹೀಲಲಿಗೆ (ಚಂದಾಪುರ)-ರಾಜನಕುಂಟೆ) ಕಾಮಗಾರಿಗಳನ್ನ ಮೊದಲು ಕೈಗೆತ್ತಿಕೊಳ್ಳಲಾಗುವುದು)
ದ್ವಿಪಥ ಯೋಜನೆಗಳು
ಯಶವಂತಪುರ - ಚನ್ನಸಂದ್ರ ವಿಭಾಗ ಮತ್ತು ಬೈಯಪ್ಪನಹಳ್ಳಿ - ಹೊಸೂರು ನಡುವಿನ ಏಕ ಮಾರ್ಗದಿಂದಾಗಿ ಬೆಂಗಳೂರಿನಿಂದ ಹೊರವಲಯಕ್ಕೆ ರೈಲುಗಳನ್ನ ಓಡಿಸಲು ಸಾಕಷ್ಟು ಅಡಚಣೆಯುಂಟಾಗುತ್ತಿತ್ತು. ಅದಕ್ಕಾಗಿಯೇ ಈ ದ್ವಿಪಥ ಯೋಜನೆಗಳನ್ನ 2018-19ರಲ್ಲಿ ಮಂಜೂರು ಮಾಡಲಾಯಿತು.
ಕರ್ನಾಟಕ ಸರ್ಕಾರ ಮತ್ತು ರೈಲ್ವೆ ಮಂತ್ರಾಲಯವು 50-50 ವೆಚ್ಚ ಹಂಚಿಕೆಯಲ್ಲಿ ಕೈಗೊಳ್ಳಲಾಗುತ್ತದೆ.




0 Comments