Ticker

6/recent/ticker-posts

Ad Code

Responsive Advertisement

ಕಾರ್ಮಿಕರಿಗೆ ನೀಡಲಾಗುವ ಧನ ಸಹಾಯ ಪ್ರಮಾಣದಲ್ಲಿ ಏರಿಕೆ

ಬೆಂಗಳೂರು : ಕರ್ನಾಟಕ ಕಾರ್ಮಿಕ ಮಂಡಳಿ ಅಧ್ಯಕ್ಷರೂ ಆಗಿರುವ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರ ನೇತೃತ್ವದಲ್ಲಿ ನಡೆದ 90ನೇ ಸಭೆಯ ನಿರ್ಣಯಗಳನ್ನು ಇಲಾಖೆ ಜಾರಿ ಮಾಡಿದ್ದು, ಈ ಮೂಲಕ ಸಹಾಯಧನದಲ್ಲಿ ಭಾರೀ ಪ್ರಮಾಣದ ಏರಿಕೆ ಮಾಡಿ ಆದೇಶಿಸಲಾಗಿದೆ. ಕಾರ್ಮಿಕ ಇಲಾಖೆ ಕಲ್ಯಾಣ ಯೋಜನೆಗಳಡಿ ಕಾರ್ಮಿಕರಿಗೆ ನೀಡಲಾಗುವ ಧನ ಸಹಾಯದಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ. ಹೆಚ್ಚಿನ ಕಾರ್ಮಿಕರಿಗೆ ಸವಲತ್ತು ದೊರಕುವಂತೆ ಮಾಡಲಾಗಿದೆ.


ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ಜಾರಿ ಮಾಡುತ್ತಿರುವ ಕಲ್ಯಾಣ ಯೋಜನೆಗಳು ಸಂಘಟಿತ ಕಾರ್ಮಿಕರು ಮತ್ತು ಅವರ ಕುಟುಂಬ ವರ್ಗದವರಿಗೆ ಲಭ್ಯವಿದ್ದು, ಸಹಾಯಧನ ಏರಿಕೆ ನಿರ್ಣಯದಿಂದ ಹೆಚ್ಚಿನ ಅನುಕೂಲ ಆಗಲಿದೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದ್ದಾರೆ. ಕಾರ್ಮಿಕ ಕಲ್ಯಾಣ ಮಂಡಳಿ ಸಹಾಯಧನ ಮತ್ತು ಹೆರಿಗೆ ಭತ್ಯೆ ದರಗಳನ್ನು ಪರಿಷ್ಕರಿಸಲಾಗಿದೆ.

ಪ್ರಸ್ತುತ ಜಾರಿಯಲ್ಲಿರುವ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ಪಡೆಯಲು ಇದ್ದ ವೇತನ ಮಿತಿ 15,000 ರೂ. ನಿಂದ 21,000 ರೂ. ಏರಿಕೆ ಮಾಡಲಾಗಿದೆ. ಕಾರ್ಮಿಕ ವೈದ್ಯಕೀಯ ನೆರವು ಮೊತ್ತವನ್ನು ಈಗಿನ 10,000 ರೂ. ನಿಂದ 25,000 ರೂ.ಗಳಿಗೆ ಏರಿಕೆ ಮಾಡಲಾಗಿದ್ದು, ಕಾರ್ಮಿಕರ ಅಪಘಾತ ಧನ ಸಹಾಯವನ್ನು 3,000 ರೂ. ನಿಂದ 10000 ರೂ.ಗೆ ಏರಿಸಲಾಗಿದೆ.

ಶೈಕ್ಷಣಿಕ ಪ್ರೋತ್ಸಾಹ ಯೋಜನೆಯಡಿ ಇಲಾಖೆಯು 8ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ, ಡಿಪ್ಲೋಮಾ ಐಟಿಐ ಕೋಸ್ರ್ಗೆ, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋಸ್ರ್ಗಳಿಗೆ ಒಂದು ಕುಟುಂಬ ಓರ್ವ ವಿದ್ಯಾರ್ಥಿಗೆ ವಾರ್ಷಿಕ ಧನ ಸಹಾಯ ನೀಡುವ ಯೋಜನೆಯ ಮಾಸಿಕ ಆದಾಯ ಮಿತಿಯನ್ನು ಏರಿಕೆ ಮಾಡಿ ಹೆಚ್ಚಿನ ಕಾರ್ಮಿಕರಿಗೆ ಅವಕಾಶ ಮಾಡಿಕೊಡಲಾಗಿದೆ.

ಮೃತ ಕಾರ್ಮಿಕನ ಅಂತ್ಯ ಸಂಸ್ಕಾರಕ್ಕಿದ್ದ ಧನ ಸಹಾಯವನ್ನೂ ದ್ವಿಗುಣ ಮಾಡಲಾಗಿದ್ದು, 5,000 ರೂ.ನಿಂದ 10,000 ರೂ.ಗೆ ಹೆಚ್ಚಿಸಲಾಗಿದೆ. ವಾರ್ಷಿಕವಾಗಿ ವೈದ್ಯಕೀಯ ತಪಾಸಣಾ ಶಿಬಿರ ಹಮ್ಮಿಕೊಳ್ಳುವ ಟ್ರೇಡ್ ಯೂನಿಯನ್ ಅಥವಾ ಸಂಸ್ಥೆಗಳಿಗೆ ನೀಡಲಾಗುತ್ತಿದ್ದ ಧನ ಸಹಾಯದಲ್ಲಿ ಭಾರೀ ಏರಿಕೆ ಮಾಡಲಾಗಿದೆ. ಈ ಧನ ಸಹಾಯವನ್ನು 30000 ರೂ ನಿಂದ ಒಂದು ಲಕ್ಷ ರೂ.ಗಳಿಗೆ ಏರಿಕೆ ಮಾಡಲಾಗಿದೆ.

ಸಂಘಟಿತ ಮಹಿಳಾ ಕಾರ್ಮಿಕರಿಗೆ ಮೊದಲ ಎರಡು ಮಕ್ಕಳಿಗೆ ತಲಾ 10,000 ರೂ. ಹೆರಿಗೆ ಭತ್ಯೆ ನೀಡುವಂತಹ ಮಹತ್ವದ ನಿರ್ಧಾರವನ್ನೂ ಇಲಾಖೆ ಕೈಗೊಂಡಿದೆ. ವಾರ್ಷಿಕ ಕ್ರೀಡಾಕೂಟ ಧನ ಸಹಾಯವನ್ನು 50000 ರೂ. ನಿಂದ ಒಂದು ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಈ ಯೋಜನೆಗಳ ಜಾರಿಯನ್ನು ಸರ್ಕಾರದ ಯಾವುದೇ ಅನುದಾನ ಬಳಕೆ ಇಲ್ಲದೆ ಕಾರ್ಮಿಕ ಕಲ್ಯಾಣ ಮಂಡಳಿ ಸಂಪನ್ಮೂಲದಿಂದಲೇ ಭರಿಸಲಾಗುವುದು ಎಂದು ತಿಳಿಸಿರುವ ಸಚಿವರು, ಈ ಸಹಾಯಧನ ಪರಿಷ್ಕರಣೆಯಿಂದ ಸಂಘಟಿತ ಕಾರ್ಮಿಕ ವಲಯಕ್ಕೆ ಹೆಚ್ಚಿನ ಅನುಕೂಲ ಆಗಲಿ ಎಂಬುದೇ ಸರ್ಕಾರದ ಉದ್ದೇಶ ಎಂದು ಹರ್ಷ ವ್ಯಕ್ತಪಡಿಸಿದರು.

ಕಾರ್ಮಿಕ ಕಲ್ಯಾಣ ಯೋಜನೆಗಳ ದರ ಪರಿಷ್ಕರಣೆ ಕಾರ್ಮಿಕ ಸಂಘಟನೆಗಳ ಬಹು ದಿನಗಳ ಬೇಡಿಕೆಯಾಗಿತ್ತು. ಕಳೆದ ಐದಾರು ವರ್ಷಗಳಿಂದ ದರ ಪರಿಷ್ಕರಣೆ ಕಾರ್ಯ ನಡೆದಿರಲಿಲ್ಲ. ಹೀಗಾಗಿ ಸಂಕಷ್ಟ ಸಂದರ್ಭ ಮತ್ತು ಬೆಲೆಗಳಲ್ಲಿ ಆಗಿರುವ ಏರುಪೇರುಗಳನ್ನು ಪರಿಗಣಿಸಿ ಕಾರ್ಮಿಕ ಹಿತವನ್ನೇ ಪ್ರಮುಖ ಗುರಿಯಾಗಿಸಿಕೊಂಡು ದರ ಪರಿಷ್ಕರಣೆ ಮಾಡಲಾಗಿದೆ. ಕಾರ್ಮಿಕರು ಈ ಸವಲತ್ತು ಸದುಪಯೋಗಪಡಿಸಿಕೊಳ್ಳಬೇಕು ಎಂಬುದೇ ಸರ್ಕಾರದ ಉದ್ದೇಶ ಎಂದಿದ್ದಾರೆ.


Post a Comment

0 Comments

Ad Code

Responsive Advertisement