'ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ. ಮುಖ್ಯಮಂತ್ರಿ ಯಾರು ಆಗಬೇಕು ಅಂತ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಕೆಪಿಸಿಸಿ ಅಧ್ಯಕ್ಷರು ಡಿ.ಕೆ. ಶಿವಕುಮಾರ್ ಇದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಲ್ ಪಿ ನಾಯಕರು. ನೀವು ಮುಖ್ಯಮಂತ್ರಿ ಆಗಿದ್ದವರು ಎಲ್ಲರನ್ನು ನೀವೆ ಒಗ್ಗಟ್ಟನಿಂದ ತೆಗೆದುಕೊಂಡು ಹೋಗಬೇಕು. ಅಧ್ಯಕ್ಷರ ಜೊತೆಗೆ ಕೈ ಜೋಡಿಸಿ ಎಲ್ಲರೂ ಪಕ್ಷವನ್ನು ಅಧಿಕಾರಕ್ಕೆ ತರುವುದಕ್ಕೆ ಕೆಲಸ ಮಾಡಬೇಕು ಎಂದು ನಾನು ಸಿದ್ದರಾಮಯ್ಯ ಅವರಿಗೆ ಸಭೆ ಒಂದರಲ್ಲಿ ತಿಳಿಸಿದ್ದೆ' ಎಂದು ಸುದ್ದಿಗಾರರೊಂದಿಗೆ ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.
ಪಕ್ಷ ಅಧಿಕಾರಕ್ಕೆ ತರುವುದು ನಮ್ಮ ಕೆಲಸ. ಪಕ್ಷ ದೊಡ್ಡದು, ವ್ಯಕ್ತಿ ದೊಡ್ಡವರಲ್ಲ. ಪಕ್ಷದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ಕಮಿಟಿ ಇದೆ. ಯಾರು ಇಷ್ಟ ಬಂದ ಹಾಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವಹಾಗೆ ಇಲ್ಲ. ಪಕ್ಷದಲ್ಲಿ ಎಲ್ಲರಿಗೂ ಪ್ರಾಶಸ್ತ್ಯ ನೀಡಬೇಕು. ಹೈಕಮಾಂಡ್ ಆದೇಶದಮೇಲೆ ನಡೆಯಿರಿ ಎಂದು ಹೇಳಿದ್ದೇನೆ. ಡಿ.ಕೆ. ಶಿವಕುಮಾರ್ ಅವರಿಗೆ ಹಿರಿಯರ ಸಭೆ ಕರೆಯಲು ಹೇಳುತ್ತೇನೆ ಎಂದು ತಿಳಿಸಿದರು.

0 Comments