ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರ ಮಾರ್ಗದರ್ಶನದಲ್ಲಿ ಕ್ರಿಭಾ ಫೌಂಡೇಶನ್ ಸಹಯೋಗದೊಂದಿಗೆ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಮೆಗಾಸಿಟಿ ನಾದ ವರ್ಲ್ಡ್ ವೆಲ್ಫೇರ್ ಟ್ರಸ್ಟ್, ಬೀಯಿಂಗ್ ಸೋಶಿಯಲ್ ಹಾಗೂ ವಿವೇಕ ಚೇತನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊರೋನಾವೈರಸ್ ನಿಂದಾಗಿ ಸಂಕಷ್ಟಕ್ಕೊಳಗಾಗಿರುವ ಮಂಜುನಾಥನಗರದ 101 ಬಡ ಕುಟುಂಬಗಳಿಗೆ ದಿನಸಿ ಸಾಮಗ್ರಿ ಕಿಟ್ ಗಳನ್ನು ವಿತರಿಸಲಾಯಿತು.
ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಜಿಲ್ಲೆ 317ಎ ಉಪರಾಜ್ಯಪಾಲರಾದ ಲಯನ್ ಡಾ. ಶ್ರೀವಿದ್ಯಾ ಮಾತನಾಡಿ ಈ ದಿನ ವಿವೇಕಾನಂದ ರವರ ಪುಣ್ಯ ಸ್ಮರಣೆ ಅಂಗವಾಗಿ ಬಡ ಕುಟುಂಬಗಳಿಗೆ ದಿನಸಿ ವಿತರಿಸುತ್ತಿರುವುದು ನಿಜಕ್ಕೂ ಸಂತಸದ ವಿಷಯ. ವಿವೇಕಾನಂದರವರು ಹೇಳಿದ ಹಾಗೆ "ಅವಕಾಶ ಸಿಕ್ಕಾಗ ಅವಕಾಶವನ್ನು ಬಳಸಿಕೊಳ್ಳಬೇಕು ಹಾಗೂ ಅವಕಾಶ ಸಿಗದಿದ್ದಾಗ ಅವಕಾಶವನ್ನು ಹುಡುಕಿ ಕೆಲಸವನ್ನು ಮಾಡಬೇಕು" ಎಂಬಂತೆ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಮೆಗಾಸಿಟಿಯ ಅಧ್ಯಕ್ಷರಾದ ಕೃಷ್ಣಮೂರ್ತಿ ಅವರು ಈ ಕೋವಿಡ್ ಸಂಕಷ್ಟದ ಸಮಯದಲ್ಲಿ ಕೆಲಸ ಕಳೆದುಕೊಂಡು ಸಂಕಷ್ಟದಲ್ಲಿರುವ ಸಾವಿರಾರು ಬಡ ಕುಟುಂಬಗಳಿಗೆ ದಿನಸಿ ವಿತರಿಸುತ್ತಿರುವುದು, ಹಸಿದವರಿಗೆ ಮಧ್ಯಾಹ್ನದ ಊಟ ನೀಡುವುದು ಸೇರಿದಂತೆ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.



0 Comments