Ticker

6/recent/ticker-posts

Ad Code

Responsive Advertisement

2.92 ಲಕ್ಷ ಕಾರ್ಮಿಕರಿಗೆ ಜಮೆ ಆಗದ ಆರ್ಥಿಕ ಪರಿಹಾರ


 ‘ಕೋವಿಡ್‌ ಮೊದಲ ಅಲೆಯ ಸಂದರ್ಭದಲ್ಲಿ ಪರಿಹಾರ ಹಣವನ್ನು ಕಾರ್ಮಿಕರ ಬ್ಯಾಂಕ್‌ ಖಾತೆ ಆಧರಿಸಿ ಜಮೆ ಮಾಡಲಾಗಿತ್ತು. ಇಲಾಖೆಯಲ್ಲಿ ನೋಂದಾಯಿತ ಮತ್ತು ಜಿಲ್ಲಾ ಮಟ್ಟದಲ್ಲಿ ನೋಂದಾಯಿತ ಖಾತೆಗಳಿಗೆ ಹಣ ಜಮೆ ಮಾಡಿದ್ದರಿಂದ ಗೊಂದಲ ಉಂಟಾಗಿತ್ತು. ಪರಿಹಾರ ಹಣವನ್ನು ಪಾರದರ್ಶಕವಾಗಿ ವಿತರಿಸುವ ಉದ್ದೇಶದಿಂದ ಬ್ಯಾಂಕ್‌ ಖಾತೆಗೆ ಜೋಡಣೆಯಾದ ಆಧಾರ್‌ ಸಂಖ್ಯೆ ಬಳಸಲು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರದಿಂದ (ಯುಐಡಿ) ಪರವಾನಗಿ ಪಡೆಯಲಾಗಿದೆ’ ಎಂದು ಕಾರ್ಮಿಕ ಇಲಾಖೆಯ ಆಯುಕ್ತ ಅಕ್ರಂ ಪಾಷಾ ತಿಳಿಸಿದರು.

ಕೋವಿಡ್‌ ಎರಡನೇ ಅಲೆಯಿಂದ ಸಂಕಷ್ಟದಲ್ಲಿರುವವರಿಗೆ ರಾಜ್ಯ ಸರ್ಕಾರ ಘೋಷಿಸಿದ ಆರ್ಥಿಕ ಪ್ಯಾಕೇಜ್‌ನಡಿ ಕಟ್ಟಡ ಕಾರ್ಮಿಕರು ಮತ್ತು ಅಸಂಘಟಿತ ವರ್ಗದ 20.74 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಕೇವಲ 30 ದಿನಗಳಲ್ಲಿ ಕಾರ್ಮಿಕ ಇಲಾಖೆ ನೇರ ನಗದು ವರ್ಗಾವಣೆ (ಡಿಬಿಟಿ) ಮಾಡಿದೆ. ಆ ಪೈಕಿ, ಆಧಾರ್‌ ಸಂಖ್ಯೆ ಸರಿ ಇಲ್ಲದ ಕಾರಣಕ್ಕೆ 2.92 ಲಕ್ಷ ಕಾರ್ಮಿಕರ ಖಾತೆಗಳಿಗೆ ಹಣ ಜಮೆ ಆಗಿಲ್ಲ. 

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಖಾತೆಗಳಿಗೆ ತಲಾ ₹ 3 ಸಾವಿರ ಪರಿಹಾರ ಮೊತ್ತ ಡಿಬಿಟಿ ಮಾಡಲಾಗಿದೆ. ಟೈಲರ್‌ಗಳು, ಗೃಹ ಕಾರ್ಮಿಕರು, ಹಮಾಲರು, ಮೆಕ್ಯಾನಿಕ್‌ಗಳು, ಕುಂಬಾರರು, ಅಗಸರು, ಕಮ್ಮಾರರು, ಮಂಡಕ್ಕಿ ಭಟ್ಟಿ ಕಾರ್ಮಿಕರು, ಕ್ಷೌರಿಕರು, ಅಕ್ಕಸಾಲಿಗರು, ಚಿಂದಿ ಆಯುವವರು ಈ 11 ವರ್ಗಗಳ ಫಲಾನುಭವಿಗಳಿಗೆ ತಲಾ ₹ 2 ಸಾವಿರದಂತೆ ನೆರವು ನೀಡಲಾಗುತ್ತಿದೆ. ಈ ಪ್ರಕ್ರಿಯೆಗೆ ಜೂನ್‌ 5ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದ್ದರು.

‘ಇನ್ನೂ ₹ 205.78 ಕೋಟಿ ಬೇಕು’: ‘ಅಸಂಘಟಿತ ವಲಯದ 11 ವರ್ಗಗಳಲ್ಲಿ ಸೇವಾ ಸಿಂಧು ಪೋರ್ಟಲ್‌ ಮೂಲಕ ಈವರೆಗೆ (ಜುಲೈ 5) 9.80 ಲಕ್ಷ ಅರ್ಜಿಗಳು ಸಲ್ಲಿಕೆ ಆಗಿವೆ. ಅಲ್ಲದೆ, ಅಂಬೇಡ್ಕರ್‌ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೋಂದಾಯಿತ 3.59 ಲಕ್ಷ ಕಾರ್ಮಿಕರು ಸೇರಿ ಒಟ್ಟು 13.39 ಲಕ್ಷ ಅರ್ಜಿಗಳು ಸ್ವೀಕೃತಗೊಂಡಿವೆ. ಅಷ್ಟೂ ಕಾರ್ಮಿಕರಿಗೆ ₹ 2 ಸಾವಿರದಂತೆ ಪರಿಹಾರ ನೀಡಲು ₹ 267.73 ಕೋಟಿ ಬೇಕಾಗಿದೆ. 3.10 ಲಕ್ಷ ಮಂದಿಗೆ ಪರಿಹಾರ ನೀಡಲು ₹ 61.95 ಕೋಟಿ ಸರ್ಕಾರ ನೀಡಿದ್ದು, ಇನ್ನೂ 10.29 ಲಕ್ಷ ಮಂದಿಗೆ ನೀಡಲು ₹ 205.78 ಕೋಟಿ ಹೆಚ್ಚುವರಿಯಾಗಿ ಬೇಕಾಗಿದೆ. ಅರ್ಜಿ ಸಲ್ಲಿಸಲು ಇದೇ 31 ಕೊನೆಯ ದಿನವಾಗಿದ್ದು, ಇನ್ನೂ 5 ಲಕ್ಷದಿಂದ 6 ಲಕ್ಷ ಅರ್ಜಿ ಸಲ್ಲಿಯಾಗುವ ನಿರೀಕ್ಷೆ ಇದೆ’ ಎಂದು ಅಕ್ರಂ ಪಾಷಾ ತಿಳಿಸಿದರು.

Post a Comment

0 Comments

Ad Code

Responsive Advertisement