Ticker

6/recent/ticker-posts

Ad Code

Responsive Advertisement

BELLARY - AYUSH :ಆಯುಷ್ ಇಲಾಖೆಯ ವತಿಯಿಂದ ವೈದ್ಯರ ದಿನ ಆಚರಣೆ


ಬಳ್ಳಾರಿ,ಜು.01: ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ವೈದ್ಯರ ದಿನಾಚರಣೆ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು. 

ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ನಿಕಟ ಪೂರ್ವ ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ವರಪ್ರಸಾದ್ ವಿ.ಕೆ. ನಿಧನಕ್ಕೆ ಶ್ರದ್ಧಾಂಜಲಿ ಹಾಗೂ ನುಡಿ ನಮನ ಕಾರ್ಯಕ್ರಮ ನಡೆಸಲಾಯಿತು.

ತಾರಾನಾಥ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯರರಾದ ಡಾ.ಸಯ್ಯದ್ ಅತ್ತರ್ ಫಾತಿಮಾ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. 

ಈ ಸಂದರ್ಭದಲ್ಲಿ ವಿಮ್ಸ್ ಪ್ರಾದ್ಯಾಪಕರಾದ ಡಾ.ಹಳ್ಳಿಕರಿಬಸಪ್ಪ, ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ಟಿ ಫಣೀಂಧರ, ತಾರಾನಾಥ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ರಾಜಶೇಖರ್ ಗಾಣಿಗೇರ ಕೆಜಿಎಎಂಒಎ ಅಧ್ಯಕ್ಷರಾದ ಡಾ.ವಿಜಯೇಂದ್ರಾಚಾರ್, ಜಿಲ್ಲಾ ಆಯುಷ್ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ಶರಣಬಸಪ್ಪ ಎಸ್.ಜಿನಗಾ, ತಾರಾನಾಥ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಾಧ್ಯಾಪಕರಾದ ಡಾ.ಶಿವು ಅರಕೇರಿ, ಡಾ.ಪ್ರಕಾಶ ಪಾಟೀಲ ಎಎಫ್‌ಐ ಮತ್ತು ಇತರರು ಇದ್ದರು.

ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ ದಿವಂಗತ ವೈದ್ಯರಿಗೆ ನುಡಿನಮನ ಸಲ್ಲಿಸಿದರು. ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ಕರ್ತವ್ಯನಿರತ ಆಯುಷ್ ವೈದ್ಯಾಧಿಕಾರಿಗಳಿಗೆ ಮತ್ತು ಇತರೆ ಸಿಬ್ಬಂದಿಗಳಿಗೆ ಕೋವಿಡ್ 19 ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ಕರೋನಾ ವಾರಿಯರ್ಸ್ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.

ಆಯುಷ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಸಿಬ್ಬಂದಿ ವರ್ಗದವರಿಗೆ ಹಾಗೂ ಗ್ರೂಪ್ ಡಿ ನೌಕರರಿಗೂ ಸನ್ಮಾನಿಸಲಾಯಿತು.


Post a Comment

0 Comments

Ad Code

Responsive Advertisement