Ticker

6/recent/ticker-posts

Ad Code

Responsive Advertisement

ನಾನು ತಾಯಿಯಾಗಿದ್ದು ನನ್ನ ಬದುಕಿನ ಅತೀ ಸಂಭ್ರಮದ ಕ್ಷಣ: ನಟಿ ಮಯೂರಿ

ಎದೆಹಾಲು ನೀಡುವುದರ ಅವಶ್ಯಕತೆಯ ಕುರಿತಂತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾರತ್ ಹಳ್ಳಿಯ ರೈನ್ ಬೋ ಮಕ್ಕಳ ಆಸ್ಪತ್ರೆಯು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸ್ಯಾಂಡಲ್‍ವುಡ್ ನಟಿ ಮಯೂರಿ ಚಾಲನೆ ನೀಡಿದರು. 

ಈ ಸಂದರ್ಭದಲ್ಲಿ ಮಾತನಾಡಿದ ನಟಿ ಮಯೂರಿ,"ಕ್ಯಾಮರಾ ಮುಂದೆ ಹಲವು ಪಾತ್ರ ನಿಭಾಯಿಸಿದ್ದ ನನಗೆ, ನಿಜ ಜೀವನದಲ್ಲಿ ತಾಯಿಯಾದಾಗ ಆ ಪಾತ್ರ ಅದೆಷ್ಟು ಜವಾಬ್ದಾರಿಯುತ ಎಂಬುದು ಅರ್ಥವಾಯಿತು. ಆ ಬದಲಾವಣೆಯನ್ನ ಅತೀವ ಸಂಭ್ರಮದಿಂದ ಸ್ವೀಕರಿಸಿದ್ದೇನೆ. ಮಗುವನ್ನ ನೋಡಿಕೊಳ್ಳುವುದು ನಿಜಕ್ಕೂ ಬಹು ದೊಡ್ಡ ಹೊಣೆ ಎಂಬುದು ನನಗೆ ಮನವರಿಕೆಯಾಗಿದೆ. ನಾನು ಈ ಜವಾಬ್ದಾರಿಯನ್ನ ಸಮರ್ಥವಾಗಿ ನಿಬಾಯಿಸುತ್ತಿದ್ದೇನೆ ಎಂದರೆ ಇದರಲ್ಲಿ ನನ್ನ ಪತಿ ಮತ್ತು ಕುಟುಂಬದವರ ಬೆಂಬಲದಿಂದಲೇ", ಎಂದು ಹೇಳಿದರು.


"ತಾಯಿ ಮಗುವಿಗೆ ಎದೆಹಾಲು ನೀಡುವುದು ಅತ್ಯವಶ್ಯಕ. ಎದೆಹಾಲನ್ನು ಅಮೃತಕ್ಕೆ ಸಮಾನ ಎನ್ನುತ್ತಾರೆ. ಶಿಶುವಿನ ಆರೋಗ್ಯಕರ ಬೆಳವಣಿಗೆಗೆ ತಾಯಿ ಎದೆಹಾಲು ಅತ್ಯಗತ್ಯ. ನಾನು ಈ ವಿಷಯದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ. ಎದೆಹಾಲಿನ ಮಹತ್ವದ ಕುರಿತು ರೈನ್ ಬೋ ಕೈಗೊಂಡಿರುವ ಈ ಜಾಗೃತಿ ಕಾರ್ಯಕ್ರಮ ತುಂಬಾ ಸಮಯೋಚಿತವಾಗಿದೆ. ಆಸ್ಪತ್ರೆಯ ಈ ಕಾಳಜಿಯ ಅಭಿಯಾನದಲ್ಲಿ ನಾನು ಜೊತೆಯಾಗಿರುವುದು ಸಂತಸ ತಂದಿದೆ", ಎಂದರು. 

ಮಾರತ್ ಹಳ್ಳಿ ರೈನ್ ಬೋ ಮಕ್ಕಳ ಆಸ್ಪತ್ರೆಯ ಶಿಶುಗಳ ತೀವ್ರನಿಗಾಘಟಕದ ಮುಖ್ಯಸ್ಥ ಡಾ. ರಕ್ಷಯ್ ಶೆಟ್ಟಿ ಮಾತನಾಡಿ,"ಶಿಶುಗಳ ಬೆಳವಣಿಗೆಗೆ ಪೌಷ್ಠಿಕಾಂಶಗಳು ತುಂಬಾ ಅವಶ್ಯಕ. ಇವು ತಾಯಿಯ ಎದೆಹಾಲಿನಿಂದಲೇ ಸಿಗುವುದು. ಈ ಕಾರಣಕ್ಕೆ ತಾಯಿಂದಿರು ಮಕ್ಕಳಿಗೆ ಎದೆಹಾಲು ನೀಡುವುದರಲ್ಲಿ ನಿರ್ಲಕ್ಷ್ಯ ಮಾಡಕೂಡದು. ಮಕ್ಕಳಲ್ಲಿ ಹೆಚ್ಚಿನ ರೋಗನಿರೋಧಕ ಶಕ್ತಿ ಬೆಳವಣಿಗೆಯಾಗಲು ತಾಯಿ ಎದೆಹಾಲು ನೀಡುವುದು ಅತೀ ಮುಖ್ಯ" ಎಂದು ತಿಳಿಸಿದರು.


"ಮಕ್ಕಳಿಗೆ ಎದೆಹಾಲು ನೀಡಲು ಹಲವು ಮಹಿಳೆಯರು ಹಿಂದೇಟು ಹಾಕುತ್ತಾರೆ. ಇನ್ನು ಹಲವು ಬಾರಿ ಪರಿಸ್ಥಿತಿಯ ಕಾರಣ ಎದೆಹಾಲು ನೀಡುವುದಕ್ಕೆ ಸಾಧ್ಯವಾಗುವದಿಲ್ಲ. ಆದರೆ ಈ ವಿಷಯದಲ್ಲಿ ಯಾವತ್ತೂ ತಪ್ಪು ನಿರ್ಧಾರ ತೆಗೆದುಕೊಳ್ಳಬಾರದು. ತಾಯಿಂದಿರು ಮಕ್ಕಳಿಗೆ ಎದೆಹಾಲು ನೀಡಲೇಬೇಕು. ಅಂದಾಗ ಮಾತ್ರ ಅವರ ಸವತೋಮುಖ ಬೆಳವಣಿಗೆ ಸಾಧ್ಯವಾಗುತ್ತದೆ. ಈ ವಿಷಯದಲ್ಲಿ ಜಾಗೃತಿ ಮೂಡಿಸಲೇಬೇಕೆಂದು ರೈನ್ ಬೋ ಆಸ್ಪತ್ರೆ ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಮೂಲಕ ಎದೆಹಾಲಿನ ಮಹತ್ವವನ್ನ ಸಾರುವ ಕೆಲಸವಾಗಲಿದೆ", ಎಂದು ಮಾರತ್ ಹಳ್ಳಿ ರೈನ್ ಬೋ ಮಕ್ಕಳ ಆಸ್ಪತ್ರೆಯ ನವಜಾತ ಶಿಶು ತಜ್ಞ ಡಾ. ಬಾಬು ಎಸ್ ಮದರ್‍ಕರ್ ತಿಳಿಸಿದರು

ರೈನ್ ಬೋ ಮಕ್ಕಳ ಆಸ್ಪತ್ರೆಯ ಯುನಿಟ್ ಮುಖ್ಯಸ್ಥ ಅಕ್ಷಯ್ ಮಾತನಾಡಿ,"ರೈನ್ ಬೋ ಮಕ್ಕಳ ಆಸ್ಪತ್ರೆಯು ಆರೋಗ್ಯದ ಕಾಳಜಿ ಕುರಿತಂತೆ ನಿರಂತರವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದೆ. ಈ ಕಾರ್ಯವು ಅತೀ ಮುಖ್ಯವಾದದ್ದು ಎಂದು ನಾವು ನಂಬಿದ್ದು, ಸಮಾಜದಲ್ಲಿ ಈ ಕುರಿತು ಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗುತ್ತದೆ," ಎಂದರು. 

Post a Comment

0 Comments

Ad Code

Responsive Advertisement