ಬಳ್ಳಾರಿ ಆ ೧೨. ಅಮರ ಪ್ರೇಮಿ ಅರುಣ್ ಸಿನಿಮಾದ ವಿಶೇಷ ಪಾತ್ರದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿರುವ ಪದ್ಮಶ್ರೀ ಜೋಗತಿ ಮಂಜಮ್ಮ ನಟಿಸಿದ್ದಾರೆ ಎಂದು ಚಲನಚಿತ್ರದ ಡೈರೆಕ್ಟರ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ. ಒಲವು ಸಿನಿಮಾ ಸಂಸ್ಥೆಯು ನಿರ್ಮಿಸುತ್ತಿರುವ ʼಅಮರ ಪ್ರೇಮಿ ಅರುಣ್ʼ ಸಿನಿಮಾ, ತನ್ನ ಮೊದಲ ಸುತ್ತಿನ ಚಿತ್ರೀಕರಣವನ್ನು ಬಳ್ಳಾರಿ ನಗರದ ಜಗದಂಭ ಕಾಲೊನಿಯಲ್ಲಿ ಮುಗಿಸಿದ್ದು, ಈಗ ಮತ್ತೆ ಬಳ್ಳಾರಿಯಲ್ಲಿಯೇ ನಡೆಯಲಿರುವ ಎರಡನೇ ಸುತ್ತಿನ ಚಿತ್ರೀಕರಣಕ್ಕೆ ತಂಡ ತಯಾರಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಬಳ್ಳಾರಿ ನಗರದ ಪ್ರಮುಖ ಜಾಗಗಳಲ್ಲಿ ನಾಯಕ ಹರಿಶರ್ವಾ, ನಾಯಕಿ ದೀಪಿಕಾ ಆರಾಧ್ಯ ಸೇರಿದಂತೆ ಧರ್ಮಣ್ಣ, ಭೂಮಿಕಾ ಭಟ್, ಮಹೇಶ್ ಬಂಗ್, ಬಲರಾಜ್ವಾಡಿ, ರೋಹಿಣಿ, ವಿಜಯಲಕ್ಷ್ಮಿ ಮತ್ತು ಅನೇಕ ಕಲಾವಿದರ ನಟನೆಯಲ್ಲಿ ದೃಶ್ಯಗಳನ್ನು ಚಿತ್ರಿಸಲಾಗಿದೆ.ʼಅಮರ ಪ್ರೇಮಿ ಅರುಣ್ʼ ಸಿನಿಮಾ ವಿಶೇಷ ಪಾತ್ರಗಳಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿರುವ ಪದ್ಮಶ್ರೀ ಜೋಗತಿ ಮಂಜಮ್ಮನವರು ಮತ್ತು ಖ್ಯಾತ ರಂಗಕರ್ಮಿ ಹುಲಿಗೆಪ್ಪ ಕಟ್ಟಿಮನಿ ಅವರು ನಟಿಸಿದ್ದಾರೆ ಎಂದು, ಈ ಚಲನಚಿತ್ರವನ್ನು ಕುಟುಂಭ ಸದಸ್ಯರೆಲ್ಲರೂ ವೀಕ್ಷಿಸುವಂತದ್ದು ಎಂದು ತಿಳಿಸಿದ್ದಾರೆ. ಚಿತ್ರಕ್ಕೆ ಪ್ರವೀಣ್ ಕುಮಾರ್ ಜಿ ಅವರ ರಚನೆ-ನಿರ್ದೇಶನ, ಪ್ರವೀಣ್ ಎಸ್ ಅವರ ಛಾಯಾಗ್ರಹಣ, ಕಿರಣ್ ರವೀಂದ್ರನಾಥ್ ಅವರ ಸಂಗೀತ, ನಿರಂಜನ್ ದೇವರ ಮನೆಯವರ ಸಂಕಲನ, ಮಂಡ್ಯ ಮಂಜು ಅವರ ಕಾರ್ಯಕಾರಿ ನಿರ್ಮಾಣವಿದೆ. ಜಯಂತ ಕಾಯ್ಕಿಣಿ ಮತ್ತು ಯೋಗರಾಜ್ ಭಟ್ ಅವರ ಸಾಹಿತ್ಯವಿದೆ ಎಂದರು.


0 Comments