ಬಳ್ಳಾರಿ, ಆ.೨೧:ಆಲಮಟ್ಟಿ ಜಲಾಶಯದಲ್ಲಿ ಬಾಗೀನ ಅರ್ಪಿಸಲು ಬೆಂಗಳೂರಿನಿAದ ಮುಖ್ಯ ಮಂತ್ರಿ ಸಿ.ಎಂ.ಬಸವರಾಜ್ ಬೊಮ್ಮಾಯಿ ಅವರು ೨೧/೦೮/೨೧ ಶನಿವಾರ ಜಿಲ್ಲೆಯ ತೋರಣಗಲ್ಲು ವಿಮಾನ ನಿಲ್ದಾಣಕ್ಕೆ ಬಂದಾಗ ಬಳ್ಳಾರಿ ನಗರದ ಶಾಸಕ ಗಾಲಿ ಸೋಮಶೇಖರ ರೆಡ್ಡಿಯವರು ಬಳ್ಳಾರಿಯ ಬುಡಾ ಅಧ್ಯಕ್ಷ ಸ್ಥಾನಕ್ಕೆ ನೂತನವಾಗಿ ಆಯ್ಕೆಗೊಂಡಿರುವ ನೂತನ ಅಧ್ಯಕ್ಷ ಪಿ.ಪಾಲಣ್ಣನವರನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಪರಿಚಯ ಮಾಡಿಸಿದರು.
ಪಾಲಣ್ಣನವರು ಮುಖ್ಯಮಂತ್ರಿ ಬೊಮ್ಮಾಯಿಯವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈಸಂಧರ್ಬದಲ್ಲಿ ಪಕ್ಷದ ಹಿರಿಯರು ಮತ್ತು ಮುಖಂಡರು ಉಪಸ್ಥಿತರಿದ್ದರು.
0 Comments