ಬಳ್ಳಾರಿ, ಸೆ 26. ಬಳ್ಳಾರಿ ಮಹಾನಗರ ಪಾಲಿಕೆಗೆ ಹೊಸದಾಗಿ ಚುನಾಯಿತರಾಗಿರುವ ಕಾಂಗ್ರೆಸ್ ಪಕ್ಷದ ಸದಸ್ಯರನ್ನು ಶನಿವಾರ ಬಳ್ಳಾರಿ ಗ್ರಾಮಾಂತರ ಜನಪ್ರಿಯ ಶಾಸಕರಾದ ಸನ್ಮಾನ್ಯ ಬಿ.ನಾಗೇಂದ್ರ ಅವರ ನೇತೃತ್ವದಲ್ಲಿ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಸಿದ್ದರಾಮಯ್ಯನವರನ್ನು ಭೇಟಿಯಾದರು, ನಂತರ ಪಾಲಿಕೆ ಮೇಯರ್, ಉಪಮೇಯರ್ ಚುಣಾವಣೆ ಕುರಿತಂತೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರುಗಳಿಗೆ ಅಭಿನಂದಿಸಿ, ಶುಭ ಹಾರೈಸಿದರು. ತಮಿಳುನಾಡು ಹಾಗೂ ಪುದುಚೇರಿಯ ಎಐಸಿಸಿ ಉಸ್ತುವಾರಿಗಳಾದ ದಿನೇಶ್ಗುಂಡೂರಾವ್, ಮಾಜಿ ಸಚಿವರಾದ ಸಂತೋಷ್ಲಾಡ್, ಹಾಗೂ ಬಳ್ಳಾರಿ ಜಿಲ್ಲೆ ಕಾಂಗ್ರೆಸ್ ಮುಖಂಡರು ಈ ಸಂಧರ್ಭದಲ್ಲಿ ಹಾಜರಿದ್ದರು.

0 Comments