ಬಳ್ಳಾರಿ ಸೆ 13. ಕೇಂದ್ರದ ಮಾಜಿ ಸಚಿವ,ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರು ನಿಧನ ಹೊಂದಿದ್ದಾರೆ. ಯೋಗ ಮಾಡುವ ವೇಳೆ ಆಯತಪ್ಪಿ ಬಿದ್ದು, ತಲೆಗೆ ಪೆಟ್ಟು ಮಾಡಿಕೊಂಡಿದ್ದ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಬಳಿಕ ಮಂಗಳೂರಿನ ಯೆನಪೋಯ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಚಿಕಿತ್ಸೆಗೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಕಾಂಗ್ರೆಸ್ ನ ಹಿರಿಯ ಮುಖಂಡರ ಅಗಲಿಕೆಯಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗದೆ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಬಳ್ಳಾರಿ ಮಹಾನಗರ ಪಾಲಿಕೆಯ 20ನೇ ವಾರ್ಡಿನ ಸದಸ್ಯರಾದ ವಿಕ್ಕಿಯವರು ಸಂತಾಪ ಸೂಚಿಸಿದ್ದಾರೆ.
VARTHAJALA, BELLARY

0 Comments