Ticker

6/recent/ticker-posts

Ad Code

Responsive Advertisement

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ “ಮಾತಾಡ್ ಮಾತಾಡ್ ಕನ್ನಡ”

ಬೆಂಗಳೂರು: ನಗರದ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು “ಮಾತಾಡ್ ಮಾತಾಡ್ ಕನ್ನಡ” ಅಭಿಯಾನದ ಪ್ರಯುಕ್ತವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. 




ಕನ್ನಡಾಂಬೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು .  ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತ್‍ಕುಮಾರ್, ಶಾಸಕರಾದ ಸಂಜೀವ ಮಠಂದೂರು, ವಿಧಾನಪರಿಷತ್ ಸದಸ್ಯರಾದ ಪ್ರತಾಪ್‍ಸಿಂಹ ನಾಯಕ್, ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರು ಮತ್ತು ರಾಜ್ಯ ವಕ್ತಾರರಾದ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗಳಾದ ಲೋಕೇಶ್ ಅಂಬೆಕಲ್ಲು, ಬಿಜೆಪಿ ರಾಜ್ಯ ಮುಖ್ಯ ವಕ್ತಾರರು ಹಾಗೂ ವಿಧಾನಪರಿಷತ್ ಮಾಜಿ ಸದಸ್ಯರೂ ಆದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮತ್ತು ಚುನಾವಣಾ ಆಯೋಗದ ಸಂಯೋಜಕರಾದ ದತ್ತಗುರು ಹೆಗಡೆ, ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡು ಕನ್ನಡ ತಾಯಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. 

ಇದೇ ಸಂದರ್ಭದಲ್ಲಿ ಬಿಬಿಎಂಪಿ ಫ್ರೌಢಶಾಲೆಯ ವಿದ್ಯಾರ್ಥಿಗಳು, ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಹಾಗೂ ಸಿಬ್ಬಂದಿಗಳು “ಜೋಗದ ಸಿರಿ ಬೆಳಕಿನಲ್ಲಿ”, “ಹುಟ್ಟಿದರೆ ಕನ್ನಡನಾಡಲ್ಲಿ ಹುಟ್ಟಬೇಕು” ಮತ್ತು “ಹಚ್ಚೇವು ಕನ್ನಡದ ದೀಪ” - ಹಾಡುಗಳನ್ನು ಇಂಪಾಗಿ ಹಾಡುವ ಮೂಲಕ ಕನ್ನಡದ ಅಭಿಮಾನ ಮತ್ತು ಜಾಗೃತಿ ಮೂಡಿಸಿದರು.              


Post a Comment

0 Comments

Ad Code

Responsive Advertisement