ಬೆಂಗಳೂರು: ಸೇವಾ ಸಮರ್ಪಣಾ ಅಭಿಯಾನದ ಅಂಗವಾಗಿ ಇಂದು ಬೊಮ್ಮನಹಳ್ಳಿಯಲ್ಲಿ ಇಂದು ಬೃಹತ್ ಪ್ರಮಾಣದ ಅಂಚೆ ಕಾರ್ಡ್ ಅಭಿಯಾನ ಏರ್ಪಡಿಸಿ ಪ್ರಧಾನಮಂತ್ರಿಗಳಿಗೆ ಅಭಿನಂದನಾ ಪತ್ರ ಬರೆಯಲಾಯಿತು.
ಪ್ರಧಾನಿಯವರಾದ ನರೇಂದ್ರ ಮೋದಿ ಅವರು 20 ವರ್ಷಗಳ ಸಮರ್ಥ- ಜನಪರ ಆಡಳಿತದ ಮೂಲಕ ದೇಶದ ಜನಪರ ನಾಯಕರಾಗಿ ಹೊರಹೊಮ್ಮಿದ್ದಾರೆ. ವಿಶ್ವವಂದ್ಯ ನಾಯಕರೆಂದು ಅವರನ್ನು ಗುರುತಿಸಲಾಗುತ್ತಿದೆ. ಪ್ರಧಾನಿಯವರು ಭ್ರಷ್ಟಾಚಾರರಹಿತವಾಗಿ ಯೋಜನೆಗಳ ಅನುಷ್ಠಾನ ಮತ್ತು ದೇಶದ ಅಭ್ಯುದಯಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಪ್ರಶಂಸನೀಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ ಅವರು ತಿಳಿಸಿದರು. ಶಾಸಕರು ಮತ್ತು ವಿಧಾನಸಭಾ ಮುಖ್ಯ ಸಚೇತಕರಾದ ಸತೀಶ್ ರೆಡ್ಡಿ ಮತ್ತು ಪಕ್ಷದ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
0 Comments