Ticker

6/recent/ticker-posts

Ad Code

Responsive Advertisement

ಪ್ರಧಾನಿ ಮೋದಿ ಆರೆಸ್ಸೆಸ್ ಕೀಲುಗೊಂಬೆ:.ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪ

ಬೆಂಗಳೂರು, : ಪ್ರಧಾನಿ ಮೋದಿ ಅವರು ಆರೆಸ್ಸೆಸ್ ಕೀಲುಗೊಂಬೆ ಆಗಿದ್ದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮರಾಜಪೇಟೆಯ ಕೇಶವ ಕೃಪದ ಕೃಪಾಕಟಾಕ್ಷ, ಡೈರೆಕ್ಷನ್'ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.



ಕಳೆದ 7 ದಿನಗಳಿಂದ ನಡೆದ ಜನತಾ ಪರ್ವ 1.0 ಹಾಗೂ ಮಿಷನ್ 123 ಕಾರ್ಯಾಗಾರದ ಕೊನೆ ದಿನವಾದ ಮಾಧ್ಯಮಗಳ ಜತೆ ಮಾತನಾಡಿದರು. ಕಳೆದ ಹಲವು ದಿನಗಳಿಂದ ಆರೆಸ್ಸೆಸ್ ಬಗ್ಗೆ ಅಧ್ಯಯನ ಮಾಡುತ್ತಿದ್ದೇನೆ. ಹಲವಾರು ಪುಸ್ತಕಗಳನ್ನು ಓದುತ್ತಿದ್ದೇನೆ. ಆರೆಸ್ಸೆಸ್ ಹೇಗೆ ಕೆಲಸ ಮಾಡುತ್ತದೆ ಹಾಗೂ ಚುನಾಯಿತ ಸರಕಾರಗಳನ್ನು ಹೇಗೆ ಕಪಿಮುಷ್ಟಿಯಲ್ಲಿ ಇಟ್ಟುಕೊಳ್ಳುತ್ತದೆ ಎಂಬುದನ್ನು ತಿಳಿದು ನನಗೆ ಆಘಾತ ಆಯಿತು ಎಂದರು.   

ಸಂಘದ ಐಡಿಯಾಲಜಿ ಹೊಂದಿರುವ ಅಧಿಕಾರಿಗಳನ್ನು ತನ್ನ ತಾಳಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದೆ ಆರೆಸ್ಸೆಸ್. ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಅಧಿಕಾರಿಗಳು ಸಂಘದ ತರಬೇತಿ ಪಡೆದು ಕೆಲಸ ಮಾಡುತ್ತಿದ್ದಾರೆ ಅನ್ನುವ ಮಾತಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ನಾಯಕರಿಗೆ ಸ್ವಾತಂತ್ರ‍್ಯ ಇಲ್ಲ. ನಮ್ಮ ರಾಜ್ಯದ ಬಿಜೆಪಿ ಸರಕಾರದ ಎರಡನೇ ಮುಖ್ಯಮಂತ್ರಿ ಕೇಶವಕೃಪಕ್ಕೆ ಏಕೆ ಹೋದರು. ಎಲ್ಲಿಯೇ ಹೋದರೂ ಆರೆಸ್ಸೆಸ್ ಕಚೇರಿಗಳಿಗೆ ಯಾಕೆ ಹೋಗುತ್ತಾರೆ? ರಾಜ್ಯದಲ್ಲಿ ಇರುವುದು ಸಂಪೂರ್ಣ ಆರೆಸ್ಸೆಸ್ ಸರಕಾರ. ಕೇಶವಕೃಪಕ್ಕೆ ಜನ ಮತ ಹಾಕಿಲ್ಲ ಎಂಬುದನ್ನು ಆಡಳಿತ ನಡೆಸುವವರು ಅರ್ಥ ಮಾಡಿಕೊಳ್ಳಬೇಕು ಎಂದರು.

ಇವರಿಗೆ ದೇಶದ ಮತ್ತು ರಾಜ್ಯದ ಪ್ರಗತಿಯ ಅಜೆಂಡಾ ಇಲ್ಲ. ಜನರನ್ನು ಮನುಸ್ಮೃತಿ ಯುಗಕ್ಕೆ ತೆಗೆದುಕೊಂಡು ಹೋಗುವುದೇ ಅವರ ಅಜೆಂಡಾ. ನಾವು ಕೂಡ ಹಿಂದುಗಳೇ. ನಮಗೆ ಹಿಂದುತ್ವಕ್ಕಿAತ ಮೊದಲು ದುಡಿಯುವ ಕೈಗೆ ದುಡುಮೆ ಬೇಕು. ಅನ್ನ ಬೇಕು. ಸರ್ಕಾರ ಈ ರಾಜ್ಯದ, ದೇಶದ ಬಡವರ ಬಗ್ಗೆ ಗಮನ ಹರಿಸಬೇಕು. ಅಟಲ್ ಬಿಹಾರಿ ವಾಜಪೇಯಿ ಎಂಥ ನಾಯಕರು ಎಂಬುದು ನಮಗೆಲ್ಲರಿಗೂ ಗೊತ್ತು. ಹೆಜ್ಜೆ ಹೆಜ್ಜೆಗೂ ಅವರ ಸರಕಾರಕ್ಕೆ ಅಡ್ಡಿ ಮಾಡಿತು ಆರೆಸ್ಸೆಸ್. ಜಿನ್ನಾ ಅವರನ್ನು ಹೊಗಳಿದ ಒಂದೇ ಕಾರಣಕ್ಕೆ ಅಡ್ವಾಣಿ ಅವರನ್ನು ರಾಜಕೀಯವಾಗಿ ಮುಗಿಸಲಾ ಯಿತು. ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಅಪಮಾನಕರ ರೀತಿಯಲ್ಲಿ ಕೆಳಗಿಳಿಸಲಾಯಿತು ಎಂದು ಹೇಳಿದರು.

ಈ ದೇಶದಲ್ಲಿ ಸಣ್ಣ ಪುಟ್ಟ ಸಮಾಜಗಳಿಗೆ ಶಿಕ್ಷಣ, ಆರೋಗ್ಯ ಕೊಟ್ಟಿರುವುದು ಆರೆಸ್ಸೆಸ್ ಅಲ್ಲ. ಹಿಂದುತ್ವ ಹಾಗೂ ಕೋಮುವಾದವನ್ನು ಹರಡುವ ಕೆಲಸವನ್ನು ಬಿಟ್ಟರೆ ಬೇರೆ ಯಾವ ಸಾಧನೆಯನ್ನೂ ಅದು ಮಾಡಿಲ್ಲ. ದೇಶದ ಬಡತನದ ಬಗ್ಗೆ, ಸಮಸ್ಯೆಗಳ ಬಗ್ಗೆ ಆರೆಸ್ಸೆಸ್ ಸಭೆಗಳಲ್ಲಿ ಚರ್ಚೆ ಆಗಿಲ್ಲ. ದೇಶವನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುವುದು ಒಂದೇ ಅವರ ಅಜೆಂಡಾ. ಆರೆಸ್ಸೆಸ್ ಕೇಂದ್ರಬಿAದು ಇಟ್ಟಕೊಂಡು ಬಿಜೆಪಿ ಕೆಲಸ ಮಾಡುತ್ತಿದೆ. ರಾಜಕೀಯವಾಗಿ ಪಕ್ಷಕ್ಕೆ ಸ್ವಾತಂತ್ರ‍್ಯ ಇಲ್ಲ. ಕೆಲ ವರ್ಷಗಳ ಹಿಂದೆ ಬಿಜೆಪಿಯನ್ನೆ ವಿಸರ್ಜಿಸಿ ಹೊಸ ಪಕ್ಷ ರಚನೆಯತ್ತ ಅದು ಅಲೋಚನೆ ಮಾಡಿತ್ತು ಎಂದು ಹೇಳಿದರು.

ಮತಾಂತರ ನಿಷೇಧ ವಿಧೇಯಕದ ಬದಲು ಜನರಲ್ಲಿ ವಿಶ್ವಾಸ ತುಂಬಬೇಕು. ಉದ್ಯೋಗ ಶಿಕ್ಷಣ ಕೊಡಬೇಕು. ಆರ್ಥಿಕ ಶಕ್ತಿ ತಂದುಕೊಡಬೇಕು. ಮತಾಂತರ ನಿಷೇಧ ವಿದೇಯಕದಿಂದ ಮತಾಂತರವನ್ನು ನಿಲ್ಲಿಸಲು ಸಾಧ್ಯವಿಲ್ಲ. ಶಿಕ್ಷಣ, ಆರೋಗ್ಯ, ವಸತಿ ಮುಂತಾದ. ಸೌಲಭ್ಯಗಳನ್ನು ಉತ್ತಮವಾಗಿ ಒದಗಿಸಿದ್ದಿದ್ದರೆ ಮತಾಂತರ ಎನ್ನುವ ಶಬ್ದವೇ ಕೇಳುತ್ತಿರಲಿಲ್ಲ. ಸ್ವಯಂ ಪ್ರೇರಿತರಾಗಿ ಬೇರೆ ಧರ್ಮಕ್ಕೆ ಜನ ಹೋಗುತ್ತಿರುವ ಉದಾಹರಣೆ ಇದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಬೌದ್ಧ ಧರ್ಮಕ್ಕೆ ಹೋದರು. ಇದು ಇಂದಿನ ಸಮಸ್ಯೆ ಅಲ್ಲ ಎಂದು ಹೇಳಿದರು.  

ಬಿಜೆಪಿಯವರಿಗೆ ಬೇಕಾಗಿರುವುದು ಶಾಂತಿ ಅಲ್ಲ,  ನೆಮ್ಮದಿ ಅಲ್ಲ. ಅವರು ಪದೇಪದೆ ಈ ವಿಚಾರ ಹೇಳುತ್ತಿದ್ದಾರೆ. ವಿಧಾನಸಭಾ ಕಲಾಪದಲ್ಲಿ ಮತಾಂತರದ ಬಗ್ಗೆ ಚರ್ಚೆಯನ್ನು ಗಮನಿಸಿದ್ದೇನೆ. ಶಾಸಕರ ತಾಯಿ ಒಬ್ಬರು ಮತಾಂತರ ಆಗಿದ್ದರ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು. ಆದರೆ, ಇಂದಿನ ಕಾರ್ಯಗಾರದಲ್ಲಿ ಭಾಗಿಯಾಗಿದ್ದ ಕ್ರೈಸ್ತ ಗುರು ಒಬ್ಬರು, ಬೈಬಲ್'ನಲ್ಲಿ ಒತ್ತಾಯ ಮಾಡಿ ಮತಾಂತರ ಮಾಡುವುದಕ್ಕೆ ಬೆಂಬಲ ಇಲ್ಲ. ಪ್ರೀತಿಯನ್ನು ನಾವು ಬಯಸುವವರು ಎಂದರು. ನಾವು ಭಾರತೀಯರೇ ಅಂತ ಹೇಳಿದರು ಅವರು. ಅವರ ಮಾತುಗಳ ಬಗ್ಗೆ ಅಲೋಚನೆ ಮಾಡಬೇಕಿದೆ ಎಂದು ಹೇಳಿದ್ದರು. ಅದು ಸತ್ಯವಾದ ಮಾತು  ಎಂದು ಹೇಳಿದರು.

Post a Comment

0 Comments

Ad Code

Responsive Advertisement