ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರು ಚಿಕ್ಕಬಳ್ಳಾಪುರದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ, ಶಿಡ್ಲಘಟ್ಟ ತಾಲ್ಲೂಕಿನ ಬಶೆಟ್ಟಿಹಳ್ಳಿಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ, ಮುಖ್ಯಮಂತ್ರಿಗಳು ಚಿಕ್ಕಬಳ್ಳಾಪುರ ತಾಲ್ಲೂಕಿನ ಆನೆಮೊಡಗು ಗ್ರಾಮಕ್ಕೆ ತೆರಳಿ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿದರು.
ಸಚಿವರಾದ ಡಾ|| ಕೆ.ಸುಧಾಕರ್, ಆರ್.ಅಶೋಕ್, ಸಂಸದ ಮುನಿಸ್ವಾಮಿ, ಜಿಲ್ಲಾಧಿಕಾರಿ ಆರ್.ಲತಾ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
0 Comments