ಬೆಂಗಳೂರು: ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಶಾಲೆಯೊಂದರಲ್ಲಿ ಕನಿಷ್ಠ 10 ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಶಾಲಾ ಕಟ್ಟಡವನ್ನು ಸೀಲ್ ಮಾಡಿ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ.
ಚಿಕ್ಕಮಗಳೂರಿನ ಜೀವನ್ ಜ್ಯೋತಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಬೋಧಕೇತರ ಸಿಬ್ಬಂದಿ ಸೇರಿದಂತೆ ಒಟ್ಟು 470 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಚಿಕ್ಕಮಗಳೂರಿನ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಉಮೇಶ್ ತಿಳಿಸಿದ್ದಾರೆ. 11 ಜನರ ಫಲಿತಾಂಶಗಳು ಸಕಾರಾತ್ಮಕವಾಗಿವೆ ಎಂದು ಅವರು ಹೇಳಿದರು.
ಸೋಂಕಿತರೆಲ್ಲರೂ ಲಕ್ಷಣರಹಿತರಾಗಿದ್ದು, ಅವರನ್ನು ಹೋಮ್ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
0 Comments