Ticker

6/recent/ticker-posts

Ad Code

Responsive Advertisement

ಆದಿಚುಂಚನಗಿರಿ ಮಠಕ್ಕೆ ರೋಮಿ ಭಾಟಿ ಭೇಟಿ

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಉಸ್ತುವಾರಿ ರೋಮಿ ಭಾಟಿಯವರು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.



ಬೆಂಗಳೂರಿನ ವಿಜಯನಗರದಲ್ಲಿರುವ  ಪೂಜ್ಯ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ  ಸ್ವಾಮೀಜಿಯವರನ್ನು ಭೇಟಿಯಾದ ರೋಮಿ ಭಾಟಿಯವರು, ಆಮ್‌ ಆದ್ಮಿ ಪಾರ್ಟಿಯ ತತ್ತ್ವ ಸಿದ್ಧಾಂತಗಳನ್ನು ವಿವರಿಸಿದರು. ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ರವರ ಸರ್ಕಾರವು ಶಿಕ್ಷಣ, ಆರೋಗ್ಯ, ಸಾರಿಗೆ, ಸುರಕ್ಷತೆ ಹಾಗೂ ಮೂಲ ಸೌಕರ್ಯಗಳಿಗೆ ಸಂಬಂಧಿಸಿ ಕ್ರಾಂತಿಕಾರಿ ಬದಲಾವಣೆ ತಂದಿರುವುದನ್ನು ಸ್ವಾಮೀಜಿಯವರಿಗೆ ಮನವರಿಕೆ ಮಾಡಿಕೊಟ್ಟರು. ಕರ್ನಾಟಕದಲ್ಲಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ. 40% ಭ್ರಷ್ಟಾಚಾರ ನಡೆಯುತ್ತಿರುವುದರ ವಿರುದ್ಧ ಹೋರಾಡಲು ಆಮ್‌ ಆದ್ಮಿ ಪಾರ್ಟಿ ನಿರ್ಧರಿಸಿದ್ದು, ಈ ಸದುದ್ದೇಶದ ಹೋರಾಟದಲ್ಲಿ ಯಶಸ್ಸು ಸಿಗುವಂತೆ ಆಶೀರ್ವಾದ ಮಾಡಬೇಕೆಂದು ರೋಮಿ ಭಾಟಿಯವರು ಮನವಿ ಮಾಡಿದರು.

ರೋಮಿ ಭಾಟಿಯವರಿಗೆ ಆಶೀರ್ವಾದ ಮಾಡಿದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರು, “ದೆಹಲಿಯ ಅರವಿಂದ್ ಕೇಜ್ರಿವಾಲ್‌ರವರ ಆಡಳಿತದ ಬಗ್ಗೆ ಸಾಕಷ್ಟು ಕೇಳಿರುವೆ. ಅವರು ದೆಹಲಿಯಲ್ಲಿ ಜಾರಿಗೆ ತಂದಿರುವ ಜನಪರ ಯೋಜನೆಗಳು ನಮ್ಮಲ್ಲೂ ಜಾರಿಗೆ ಬರಲಿ. ಆಮ್‌ ಆದ್ಮಿ ಪಾರ್ಟಿಗೆ ಒಳಿತಾಗಲಿ. ರಾಜಕೀಯದಿಂದ ಭ್ರಷ್ಟಾಚಾರವನ್ನು ದೂರವಿಡುವ ನಿಮ್ಮ ಉದ್ದೇಶ ಶೀಘ್ರವೇ ಈಡೇರಲಿ” ಎಂದು ಹೇಳಿದರು.

ಒಕ್ಕಲಿಗರ ಸಂಘದ ಚುನಾವಣೆಯ ಅಭ್ಯರ್ಥಿ ಚನ್ನಪ್ಪಗೌಡ ನೆಲ್ಲೂರು, ಎಎಪಿ ಮುಖಂಡರಾದ ನಂಜಪ್ಪ ಕಾಳೇಗೌಡ, ಲಕ್ಷ್ಮೀಕಾಂತ ರಾವ್‌, ಡಾ. ಸತೀಶ್‌ ಕುಮಾರ್‌, ಕುಶಲ ಸ್ವಾಮಿ, ಸುಹಾಸಿನಿ, ಡಾ. ರಮೇಶ್‌, ಜಗದೀಶ್‌ ಚಂದ್ರ ಜೊತೆಗಿದ್ದರು.


Post a Comment

0 Comments

Ad Code

Responsive Advertisement