Ticker

6/recent/ticker-posts

Ad Code

Responsive Advertisement

BIG BREAKING NEWS : ರಸ್ತೆ ಗುಂಡಿಗೆ ಶಿಕ್ಷಕಿ ಬಲಿ: ಎಎಪಿಯಿಂದ ಪ್ರತಿಭಟನೆ, ಮುಖಂಡರ ಬಂಧನ

ಬ್ಯಾಡರಹಳ್ಳಿ ಮುಖ್ಯರಸ್ತೆಯಲ್ಲಿದ್ದ ಗುಂಡಿಯಿಂದ ಸಂಭವಿಸಿದ ಅಪಘಾತದಲ್ಲಿ ಶಿಕ್ಷಕಿ ಶರ್ಮಿಳಾರವರು ಮೃತಪಟ್ಟಿರುವುದನ್ನು ಖಂಡಿಸಿ ಆಮ್‌ ಆದ್ಮಿ ಪಾರ್ಟಿಯು ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಿ, ಬಿಬಿಎಂಪಿ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು.





ಅಪಘಾತ ನಡೆದ ಸ್ಥಳದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ, “ರಸ್ತೆಗುಂಡಿಗಳಿಗೆ ವಾಹನ ಸವಾರರು ಬಲಿಯಾಗುತ್ತಿರುವುದು ಇದೇ ಮೊದಲೇನಲ್ಲ. ನಾವೆಲ್ಲ ಸುಮ್ಮನಿದ್ದರೆ ಇಂತಹ ಘಟನೆಗಳು ಮರುಕಳಿಸುತ್ತಲೇ ಇರುತ್ತವೆ. ರಾಜ್ಯ ಸರ್ಕಾರ, ಸ್ಥಳೀಯ ಶಾಸಕರು, ಬಿಬಿಎಂಪಿ, ಬಿಡಬ್ಲ್ಯುಎಸ್‌ಎಸ್‌ಬಿ ಅಪಘಾತದ ಜವಾಬ್ದಾರಿ ಹೊರಬೇಕು” ಎಂದು ಹೇಳಿದರು.

ಎಎಪಿಯ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕರಾದ ಎಚ್‌.ಡಿ.ಬಸವರಾಜು, “ನಾಗರಿಕರ ಜೀವವನ್ನು ರಕ್ಷಿಸುವುದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಫಲರಾಗಿದ್ದಾರೆ. ರಸ್ತೆ ದುರಸ್ತಿಗೆ ಬಿಡುಗಡೆಯಾದ ಹಣವನ್ನು ಜೇಬಿಗೆ ಇಳಿಸಿಕೊಂಡು, ವಾಹನ ಸವಾರರ ಹೆಣದ ಮೇಲೆ ಆಡಳಿತ ನಡೆಸಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಎಪಿ ಮುಖಂಡರ ಬಂಧನ:

ರಸ್ತೆ ಗುಂಡಿಗೆ ಶಿಕ್ಷಕಿ ಶರ್ಮಿಳಾ ಬಲಿಯಾಗಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಎಎಪಿ ಮುಖಂಡರನ್ನು ಪೊಲೀಸರು ಬಂಧಿಸಿ, ಮೊಕದ್ದಮೆ ದಾಖಲಿಸಿದರು. ಪೊಲೀಸ್‌ ಇಲಾಖೆಯ ಜಂಟಿ ಆಯುಕ್ತರು ಠಾಣೆಗೆ ಆಗಮಿಸಿ ಮುಖಂಡರ ಜೊತೆಗೆ ಮಾತುಕತೆ ನಡೆಸಿದರು. ಪಕ್ಷ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಎಚ್‌.ಡಿ.ಬಸವರಾಜು, ಮೋಹನ್‌ ದಾಸರಿ, ಜಗದೀಶ್‌ ವಿ ಸದಂ ಇನ್ನಿತರ ಮುಖಂಡರನ್ನು ಬಂಧಿಸಲಾಯಿತು.

ದೂರು ದಾಖಲು:

ಶಾಸಕ ಎಸ್‌.ಟಿ.ಸೋಮಶೇಖರ್‌, ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಬಿಡಬ್ಲ್ಯುಎಸ್‌ಎಸ್‌ಬಿ ಎಂಡಿಯ ವಿರುದ್ಧ ಆಮ್‌ ಆದ್ಮಿ ಪಾರ್ಟಿಯು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದೆ. ನಿರ್ಲಕ್ಷ್ಯದಿಂದಾಗಿ ಜನರ ಸಾವಿಗೆ ಕಾರಣವಾದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.


Post a Comment

0 Comments

Ad Code

Responsive Advertisement