Ticker

6/recent/ticker-posts

Ad Code

Responsive Advertisement

Breaking News: ನಾನು ಯಾರನ್ನೂ ಟೀಕಿಸಲ್ಲ, ಟೀಕಿಸುವವರನ್ನ ಬಿಡಲ್ಲ: ಡಿಕೆ ಸುರೇಶ್

ರಾಮನಗರ, ಜ 03: ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಹಾಗು ಸಚಿವ ಅಶ್ವತ್ಥ್ ನಾರಾಯಣ ಕಿತ್ತಾಟ ವಿಚಾರಕ್ಕೆ ಸಂಬ0ಧಿಸಿ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ವಿರುದ್ಧ ರಾಮನಗರ ಜಿಲ್ಲೆ ಚನ್ನಪಟ್ಟಣ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಚಿಕ್ಕಕಲ್ಯಾ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭಾಷಣ ಮಾಡಿದ್ದಾರೆ. ಸಚಿವ ಅಶ್ವತ್ಥ್ ನಾರಾಯಣ ಹಲವು ವಿಚಾರ ಪ್ರಸ್ತಾಪಿಸಿದ್ದಾರೆ. ನಾನು ಲೋಕಸಭಾ ಸದಸ್ಯನಾದ ನಂತರ ಜಾಗ ಮಂಜೂರು ಮಾಡಿದ್ದೇನೆ. ೩ ಎಕರೆ ೨೦ ಗುಂಟೆ ಭೂಮಿ ಕೊಟ್ಟು ಸಂಸ್ಕೃತ ವಿವಿ ಮಂಜೂರು ಮಾಡಲಾಗಿದೆ. ೬೦ ಕೋಟಿ ಮಂಜೂರು ಮಾಡಿರುವ ಸಿಎಂಗೆ ಧನ್ಯವಾದ ತಿಳಿಸುತ್ತೇನೆ. ಸಂಸ್ಕೃತ ವಿವಿಗೆ ೨೦೦ ಕೋಟಿ ಮೀಸಲಿಡಲು ಸಿಎಂಗೆ ಮನವಿ ಮಾಡುತ್ತೇನೆ. ಅಭಿವೃದ್ಧಿ ಕೆಲಸಕ್ಕೆ ನಾನು ಯಾವತ್ತಿಗೂ ಮುಂದೆ ಇರುತ್ತೇನೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.

ಯಾರನ್ನು ನಾನು ಟೀಕಿಸಲ್ಲ, ಟೀಕಿಸುವವರನ್ನ ನಾನು ಬಿಡಲ್ಲ. ಅಭಿವೃದ್ಧಿ ಕೆಲಸ ಮಾಡಿದ ಅಶ್ವತ್ಥ್ಗೆ ಅಭಿನಂದನೆ ತಿಳಿಸ್ತೇನೆ. ಕುಡಿವ ನೀರಿನ ಯೋಜನೆಗೆ ಡಿ.ಕೆ. ಶಿವಕುಮಾರ್ ಸಚಿವರಿದ್ದಾಗ ಯೋಜನೆ ಮಾಡಲಾಗಿತ್ತು. ಇದರಿಂದ ೯೦೦ ಹಳ್ಳಿಗಳಿಗೆ ನೀರು ಸಿಗಲಿದೆ. ಬಿಜೆಪಿ ಮಾಡುತ್ತಿರುವ ಇಂದಿನ ಅಭಿವೃದ್ಧಿ ಕೆಲಸಗಳಿಗೆ ಕಾಂಗ್ರೆಸ್ ಸರ್ಕಾರ ಹಿಂದೆಯೇ ಅನುಮೋದನೆ ಕೊಟ್ಟಿತ್ತು. ನಮ್ಮ ಕಾರ್ಯಕ್ರಮಗಳನ್ನ ಇವರು ಮುಂದುವರಿಸುತ್ತಿದ್ದಾರೆ. ಪರೋಕ್ಷವಾಗಿ ಇವು ನಮ್ಮ ಕಾರ್ಯಕ್ರಮ ಎಂದು ಸುರೇಶ್ ಹೇಳಿದ್ದಾರೆ.

ಭಾಷಣ ವೇಳೆ ಡಿ.ಕೆ.ಸುರೇಶ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಡಿ.ಕೆ.ಸುರೇಶ್ ಡೌನ್ ಡೌನ್ ಎಂದು ಬಿಜೆಪಿ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ. ನೀವು ಡೌನ್ಡೌನ್ ಮಾಡೋದಲ್ಲ ಜನ ಮಾಡಬೇಕು ಕೂತ್ಕೊಳ್ಳಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೆಸ್ ಸಂಸದ ಸುರೇಶ್ ಹೇಳಿದ್ದಾರೆ. ಈ ವೇಳೆ ಮಧ್ಯೆಪ್ರವೇಶಿಸಿದ ಸ್ಥಳೀಯ ಜೆಡಿಎಸ್ ಶಾಸಕ ಮಂಜುನಾಥ್ ಇಲ್ಲಿ ಬಲಾಬಲ ಪ್ರದರ್ಶನ ಬೇಡ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್, ಸಚಿವ ಅಶ್ವತ್ಥ್ ನಾರಾಯಣ ಕಿತ್ತಾಟ ವಿಚಾರಕ್ಕೆ ಸಂಬ0ಧಿಸಿ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ವಿರುದ್ಧ ರಾಮನಗರ ಜಿಲ್ಲೆ ಚನ್ನಪಟ್ಟಣ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಡಾ.ಅಶ್ವತ್ಥ್ ಪ್ರತಿಕೃತಿಗೆ ಚಪ್ಪಲಿ ಹಾರಹಾಕಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Varthajala daily, Bengaluru

Post a Comment

0 Comments

Ad Code

Responsive Advertisement