ರಾಮನಗರ, ಫೆ. 12: ಹಿಜಾಬ್ ವಿವಾದ ರಾಜ್ಯದಲ್ಲಿ ದಿನೇ ದಿನೇ ಸೂಕ್ಷ್ಮತೆ ಪಡೆದುಕೊಳ್ಳುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಸಾಮಾಜಿಕ ಜಾಲತಾಣಗಳ ಮೇಲೆ ಕೂಡ ನಿಗಾ ವಹಿಸಿದ್ದಾರೆ.
ವಿವಾದಿತ ಪೋಸ್ಟ್, ಪ್ರಚೋದನಕಾರಿ ಹೇಳಿಕೆ ನೀಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಮನಗರ ಎಸ್ಪಿ ಹಿಂದೂ ಮತ್ತು ಮುಸ್ಲಿಂ ಮುಖಂಡರು ಹಾಗೂ ಇನ್ನಿತರೆ ಸಂಘಟನೆಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
0 Comments