ಬೆಂಗಳೂರು, ಫೆ 19: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದ್ದಾರೆ.
ಅವರ ಅತ್ಯುತ್ತಮ ನಾಯಕತ್ವ ಮತ್ತು ಸಮಾಜ ಕಲ್ಯಾಣಕ್ಕೆ ಅವರು ನೀಡುತ್ತಿದ್ದ ಒತ್ತು ತಲೆಮಾರುಗಳಿಂದ ಜನರಿಗೆ ಪ್ರೇರಣೆಯಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ; "ನಾನು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ನಮಿಸುತ್ತೇನೆ. ಅವರ ಅತ್ಯುತ್ತಮ ನಾಯಕತ್ವ ಮತ್ತು ಸಮಾಜ ಕಲ್ಯಾಣಕ್ಕೆ ಅವರು ನೀಡುತ್ತಿದ್ದ ಮಹತ್ವ ತಲೆಮಾರುಗಳಿಂದ ಜನರನ್ನು ಪ್ರೇರೇಪಿಸುತ್ತಿದೆ. ಸತ್ಯ ಮತ್ತು ನ್ಯಾಯದ ಮೌಲ್ಯಗಳ ಪರವಾಗಿ ನಿಲ್ಲುವಲ್ಲಿ ಅವರು ರಾಜಿಯಾಗಲಿಲ್ಲ. ಅವರ ಆಶಯವನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ."
Varthajala daily, Bengaluru
0 Comments