"ವಿಶ್ವ ಮಹಿಳಾ ದಿನಾಚರಣೆ" ಅಂಗವಾಗಿ ರಕ್ತದಾನ ಶಿಬಿರ ಹಾಗೂ "ದಿಟ್ಟ ಮಹಿಳಾ ಪ್ರಶಸ್ತಿ" ಪ್ರದಾನ ಸಮಾರಂಭ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪಾಲಿಕೆ ಕೇಂದ್ರ ಕಛೇರಿ ಆವರಣದ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಏರ್ಪಡಿಸಿದ್ದ "ವಿಶ್ವ ಮಹಿಳಾ ದಿನಾಚರಣೆ" ಸಮಾರಂಭದಲ್ಲಿ ಮುಖ್ಯ ಆಯುಕ್ತರಾದ ಶ್ರೀ ಗೌರವ್ ಗುಪ್ತ ರವರು ಭಾಗವಹಿಸಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ತದನಂತರ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕಿಯರು ಮತ್ತು ಪಾಲಿಕೆಯ ಅಧಿಕಾರಿ ಮತ್ತು ನೌಕರರಿಗೆ "ದಿಟ್ಟ ಮಹಿಳಾ ಪ್ರಶಸ್ತಿ" ಪ್ರದಾನ ಮಾಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವಿಶೇಷ ಆಯುಕ್ತರಾದ ಶ್ರೀಮತಿ ತುಳಸಿ ಮದ್ದಿನೇನಿ, ರಂಗಪ್ಪ, ಸಂಘದ ಅಧ್ಯಕ್ಷ ಅಮೃತ್ ರಾಜ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
0 Comments