ನೀರಾವರಿ ಕ್ಷೇತ್ರಕ್ಕೆ ಸಂಬಂಧಿಸಿ ರಾಜ್ಯಕ್ಕೆ 75 ವರ್ಷಗಳಿಂದ ನಿರಂತರ ಅನ್ಯಾಯ ಆಗಿದೆ. ದೇವೇಗೌಡರು ಪ್ರಧಾನಿ ಆಗಿದ್ದ ಸಂದರ್ಭವನ್ನು ಹೊರತುಪಡಿಸಿದರೆ ಉಳಿದೆಲ್ಲ ಸಂದರ್ಭಗಳಲ್ಲಿ ರಾಜ್ಯಕ್ಕೆ ಭಾರೀ ಅನ್ಯಾಯ ಆಗಿದೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು. ಕೃಷ್ಣಾ ನದಿ ಯೋಜನೆಯನ್ನು ರಾಷ್ಟ್ರೀಯ ಯೊಜನೆ ಎಂದು ಘೋಷಿಸಿ ಎಂದು ರಾಜ್ಯ ಸರಕಾರ ಈಗ ಕೇಳುತ್ತಿದೆ. ಆದರೆ, ಕೇಂದ್ರವು ರಾಜ್ಯದ ಜತೆಗೆ ಹೇಗೆ ನಡೆದುಕೊಂಡಿದೆ ಎಂಬುದನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳನ್ನು ಜನರ ಮುಂದೆ ಅನುಷ್ಠಾನಗೊಳಿಸಿ, ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಎಂದು ಕುಮಾರಸ್ವಾಮಿ ಮನವಿ ಮಾಡಿದರು.
0 Comments