ಕಳೆದ ನವೆಂಬರ್ ತಿಂಗಳಲ್ಲಿ ಜೋರು ಮಳೆಯಾದ ಪರಿಣಾಮ ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಜಲಾವೃತಗೊಂಡು ಸಾಕಷ್ಟು ಸಮಸ್ಯೆಯಾಗಿತ್ತು. ಇದೀಗ ಆ ಭಾಗದಲ್ಲಿ ಜಲಾವೃತವಾಗದೆ ಯಲಹಂಕ ಕೆರೆಯಿಂದ ಜಕ್ಕೂರು ಕೆರೆಗೆ ಸರಾಗವಾಗಿ ನೀರು ಹರಿದು ಹೋಗುವಂತೆ ರಾಜಕಾಲುವೆಗಳ ಅಗಲೀಕರಣ ಕೆಲಸ ತ್ವರಿತಗತಿಯಲ್ಲಿ ನಡೆಯುತ್ತಿದೆ. ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ನಲ್ಲಿ ಹಾದುಗೋಗುವ ರಾಜುಲುವೆಯನ್ನು 8 ಅಡಿಯಿಂದ 10 ಅಡಿಗೆ ಅಗಲೀಕರಣ ಮಾಡಿದ್ದು, ಸದರಿ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ಇದಕ್ಕೆ ಮಾನ್ಯ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಜಲಾವೃತ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
0 Comments