Ticker

6/recent/ticker-posts

Ad Code

Responsive Advertisement

ಆರೋಗ್ಯಕರ ಭಾರತವನ್ನು ರೂಪಿಸುವಂತ ಕೆಲಸ ಮಾಡೋಣ : ಡಿ. ಕೆ ಸುರೇಶ್

ಬೆಂಗಳೂರು ನಗರ ಜಿಲ್ಲೆ ಏ .18  (ಕವಾ): ಆರೋಗ್ಯ ಇದ್ದರೆ ಉತ್ತಮವಾದ ಜೀವನವನ್ನು ನಡೆಸಲು ಸಾಧ್ಯ. ಇತ್ತೀಚಿನ ದಿನಗಳಲ್ಲಿ ಆರೋಗ್ಯದಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತಿದ್ದು ನಮ್ಮ ದೇಶವನ್ನು ಆರೋಗ್ಯಕರವಾದ ದೇಶವನ್ನಾಗಿ ಮಾಡುವಂತ ಕೆಲಸವನ್ನು ನಾವೆಲ್ಲರೂ ಒಟ್ಟಾಗಿ ಸೇರಿ ಮಾಡೋಣ ಎಂದು ಸಂಸದ ಡಿ.ಕೆ ಸುರೇಶ್ ಕರೆ ನೀಡಿದರು.



ಅವರು ಜಿಲ್ಲಾಡಾಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆನೇಕಲ್, ಬೆಂಗಳೂರು ನಗರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಇಂದು 75 ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಆನೇಕಲ್ ತಾಲ್ಲೂಕಿನ ಸರ್ಜಾಪುರಾದ ಡಾ.ಬಿ.ಆರ್ ಅಂಬೇಡ್ಕರ್ ಮೈದಾನ ಆವರಣದಲ್ಲಿ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ  ಉಚಿತ ಆರೋಗ್ಯ ಮೇಳ-2022 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಳೆದ ಎರಡೂವರೆ ವರ್ಷದಿಂದ ಕೋವಿಡ್ ಸಂದರ್ಭದಲ್ಲಿ ಸಾವು ಸಾಕಷ್ಟು ನೋವುಗಳನ್ನು ನೋಡಿದ್ದೇವೆ  ಇದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಎಲ್ಲಾ ತಾಲ್ಲೂಕಿಗಳಲ್ಲಿ  ಏ 18 ರಿಂದ 30 ರವರೆಗೆ ಆರೋಗ್ಯ ಶಿಬಿರವನ್ನು ಅಯೋಜಿಸಿದ್ದು   ಸಾರ್ವಜನಿಕರು ಇದರ ಸದುಪಯೋಗವನ್ನು ಪಡಿಸಿಕೊಳ್ಳಬೇಕು ಎಂದರು .  

ಇತ್ತೀಚಿನ ದಿನಗಳಲ್ಲಿ ಜನಸಾಮಾನ್ಯರ ಆರೋಗ್ಯದಲ್ಲಿ  ಬದಲಾವಣೆ ಆಗುತ್ತಿದ್ದು  ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಹೋಗಲು ಸಾಧ್ಯವಾಗುತ್ತಿಲ್ಲ, ಎಲ್ಲಾರಿಗೂ ಒಂದೇ ರೀತಿಯಾ ವೈದ್ಯಕೀಯ ಚಿಕಿತ್ಸೆ ದೊರೆಯುತ್ತಿಲ್ಲ, ಆದ್ದರಿಂದ ಸರ್ಕಾರ ಎಲ್ಲಾ ಜಿಲ್ಲೆಗಳಲ್ಲಿಯು ಕೂಡ ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊಂಡಿದೆ. ಸಾರ್ವಜನಿಕರು ಇದರ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಪ್ರತಿ ಯೊಬ್ಬ ಭಾರತೀಯರು ಸಹ ಆರೋಗ್ಯವಂತರಾಗಿರಬೇಕು ಎಂದು ಹೇಳಿ ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವಂತಹ ವೈದ್ಯಕೀಯ ಸೌಲಭ್ಯಗಳು ಸರ್ಕಾರಿ  ಆಸ್ಪತ್ರೆಯಲ್ಲಿಯೂ ಸಹ ಸಿಗುವಂತೆ ಸರ್ಕಾರ ಕಲ್ಪಿಸಿದೆ.   ರಾಜ್ಯದ ಎಲ್ಲಾ ಕುಟುಂಬಗಳಿಗೂ ಆಯುಷ್ಮಾನ್ ಕಾರ್ಡ್ ಗಳನ್ನು ನೀಡುತ್ತಿದ್ದು ಅದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು. ಎಂತಹದೆ ಕಾಯಿಲೆ ಬಂದರು ಸಹ  ಅದನ್ನು ನೀವು ಒಡೆದುಹೋಡಿಸುವ ಕೆಲಸವನ್ನು ನಿಮ್ಮ ಧೈರ್ಯದಿಂದ ಮಾಡಬೇಕು.ಅವರವರ ಆರೋಗ್ಯವು ಅವರವರ  ಕೈಯಲ್ಲೇ ಇದೆ ಎಂದರು. 

ಆರೋಗ್ಯ ಮೇಳವು ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು.  ಇದು ದಿನನಿತ್ಯದ ಕಾರ್ಯಕ್ರಮವಾಗಬೇಕು. ಸರ್ಕಾರವು ಆಯೋಜಿಸಿರುವ  ಈ ಶಿಬಿರಗಳಲ್ಲಿ  ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅನೇಕಲ್ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶಿವಣ್ಣರವರು ತಿಳಿಸಿದರು 

ವಿಧಾನ ಸಭಾ ಪರಿಷತ್ ಸದಸ್ಯರಾದ ಹೆಚ್ .ಎಸ್ . ಗೋಪಿನಾಥ್  ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಗೂ ಶಿಕ್ಷಣ , ಪರಿಸರ ,  ಆರೋಗ್ಯ  ಅತ್ಯವಶ್ಯಕವಾಗಿದ್ದು   ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವಂತ  ಕಾರ್ಯಕ್ರಮ  ಇದಾಗಿದೆ. ನಾವು ನಮ್ಮ ಜೀವನದ ದಿನನಿತ್ಯದ ಚಟುವಟಿಕೆಗಳು  ಹಾಗೂ ಆಹಾರವನ್ನು  ಯಾವ ರೀತಿ  ಪಡೆದುಕೊಳ್ಳಬೇಕು  ಎಂಬುದು ಮುಖ್ಯ.   ಕೇವಲ  ಕಾರ್ಯಕ್ರಮಕ್ಕೋಸ್ಕರ ಆಗಬಾರದು  ಕಾರ್ಯಕ್ರಮದ ಮೂಲ ಉದ್ದೇಶ ಈಡೇರಿಕೆ ಮಾಡುವುದರ ಕಡೆ ಗಮನ ಕೊಡಬೇಕು ಎಂದರು.

ಇದೇ ಸಂದರ್ಭದಲ್ಲಿ  ಸಾರ್ವಜನಿಕರಿಗೆ  ಆಯುಷಮಾನ  ಕಾರ್ಡ್ ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ  ಸರ್ಜಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಶ್ರೀನಿವಾಸ್,  ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಇಲಾಖೆಯ ಮುಖ್ಯ ನಿರ್ವಾಹಕರಾದ  ವಿನುತ ರಾಣಿ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು  ಹಾಗೂ ಮತ್ತಿತರರು  ಉಪಸ್ಥಿತರಿದ್ದರು.

Post a Comment

0 Comments

Ad Code

Responsive Advertisement