ಜನತಾ ಜಲಧಾರೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ರಾಜ್ಯದ ಜನತೆ 5 ವರ್ಷಗಳ ಆಳ್ವಿಕೆಗೆ ಅವಕಾಶ ಕೊಟ್ಟರೆ ರಾಜ್ಯಕ್ಕೆ ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಕುಮಾರಸ್ವಾಮಿ ಅವರು ಹೇಳಿದರು.ಈ ಯೋಜನೆಗಳ ಜಾರಿಗೆ ಎಷ್ಟು ಕೋಟಿ ಹಣ ಖರ್ಚಾದರೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಜನರಿಗೆ ನೀರನ್ನು ಒದಗಿಸುವುದೇ ನಮ್ಮ ಸಂಕಲ್ಪ. ಅದಕ್ಕಾಗಿ ಜನರಲ್ಲಿ ತಿಳುವಳಿಕೆ ಮೂಡಿಸಲಾಗುತ್ತಿದೆ ಎಂದು ಅವರು ಹೇಳಿದರು.ನಿನ್ನೆ ಜಗಳೂರಿನಲ್ಲಿ ಮುಖ್ಯಮಂತ್ರಿ ಕೆಲ ಕಾರ್ಯಕ್ರಮಗಳಿಗೆ ಚಾಲನೆ ಕೊಟ್ಟಿದ್ದಾರೆ. ಆದರೆ, ನಾನು ಮುಖ್ಯಮಂತ್ರಿ ಆಗಿದ್ದಾಗ ಜಗಳೂರು ಭಾಗಕ್ಕೆ ನಿರು ಕೊಡಲು, ಕೆರೆ ತುಂಬಲು ಯೋಜನೆ ರೂಪಿಸಿದ್ದೆ. ಅದಕ್ಕೆ ಬಿಜೆಪಿ ಈಗ ಅಡಿಗಲ್ಲು ಹಾಕಲು ಹೊರಟಿದೆ ಎಂದು ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು.
0 Comments