ಬಳ್ಳಾರಿ ಏ 24. ಎಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದರೆ ಎಲೆಕ್ಟ್ರಿಕ್ ವಾಹನ ತಯಾರಕರ ವಿರುದ್ಧ ಭಾರಿ ದಂಡ ವಿಧಿಸಲಾಗುವುದು, ಯಾವುದೇ ಕಂಪನಿಯು ತಮ್ಮ ಪ್ರಕ್ರಿಯೆಗಳಲ್ಲಿ ನಿರ್ಲಕ್ಷ್ಯ ತೋರಿದರೆ, ಭಾರೀ ದಂಡವನ್ನು ವಿಧಿಸಲಾಗುತ್ತದೆ ಮತ್ತು ಎಲ್ಲಾ ದೋಷಯುಕ್ತ ವಾಹನಗಳನ್ನು ಹಿಂಪಡೆಯಲು ಸಹ ಆದೇಶಿಸಲಾಗುತ್ತದೆ” ಎಂದು ಕೇಂದ್ರ ಭೂ ಸಾರಿಗೆ ಗಡ್ಕರಿ ಟ್ವೀಟ್ ಮಾಡಿದ್ದಾರೆ.
ಪ್ರತಿಯೊಬ್ಬ ಪ್ರಯಾಣಿಕರ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿರುವ ಸಚಿವರು, ‘ಎಲ್ಲಾ ದೋಷಯುಕ್ತ ವಾಹನಗಳ ಬ್ಯಾಚ್ಗಳನ್ನು ತಕ್ಷಣವೇ ಹಿಂಪಡೆಯಲು ಕಂಪನಿಗಳು ಮುಂಚಿತವಾಗಿ ಕ್ರಮ ಕೈಗೊಳ್ಳಬಹುದು’ ಎಂದು ಹೇಳಿದರು. ‘ಕಳೆದ ಎರಡು ತಿಂಗಳಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಸಂಬಂಧಿಸಿದ ಹಲವಾರು ಅವಘಡಗಳು ಬೆಳಕಿಗೆ ಬಂದಿವೆ. ಈ ಘಟನೆಗಳಲ್ಲಿ ಕೆಲವರು ಪ್ರಾಣ ಕಳೆದುಕೊಂಡಿರುವುದು ಮತ್ತು ಹಲವರು ಗಾಯಗೊಂಡಿರುವುದು ಅತ್ಯಂತ ದುರದೃಷ್ಟಕರ’ ಎಂದು ಸಚಿವರು ಹೇಳಿ ಬೇಸರವನ್ನು ವ್ಯಕ್ತ ಪಡಿಸಿದ್ದಾರೆ.

0 Comments