ಬಳ್ಳಾರಿ,ಮೇ 20: ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ ‘ಸ್ವಚ್ಛ ಬಳ್ಳಾರಿ ಸ್ವಸ್ಥ ಬಳ್ಳಾರಿ’ ಅಭಿಯಾನದಡಿ ‘ಪ್ರತಿಭೆ ನಿಮ್ಮದು ವೇದಿಕೆ ನಮ್ಮದು’ ಎಂಬ ಧ್ಯೇಯ ವಾಕ್ಯದಡಿ ನಗರದ ನಿವಾಸಿಗಳಿಗೆ ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ವಾಲಿಬಾಲ್, ಬ್ಯಾಡ್ಮಿಂಟನ್, ಥ್ರೋಬಾಲ್ ಮತ್ತು ಚೆಸ್, ಕೇರಮ್, ಬ್ಯಾಡ್ಮಿಟನ್ ಮತ್ತು ರಸಪ್ರಶ್ನೆ, ಚರ್ಚಾ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ತಾಂತ್ರಿಕ ಹಾಗೂ ಆಡಳಿತಾತ್ಮಕ ಕಾರಣಗಳಿಂದ ಜೂ.02, 03, 04ಕ್ಕೆ ಮುಂದೂಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ವಿವರಗಳಿಗಾಗಿ ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿಗಳು/ಪಾಲಿಕೆ ಸೂಚನಾ ಫಲಕ, ಯುವಜನ ಮತ್ತು ಕ್ರೀಡೆ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರ್ಯಾಲಯದ ಸೂಚನಾಫಲಕ ಅಥವಾ ವೆಬ್ಸೈಟ್ www.bellarycity.gov.in ಗೆ ಭೇಟಿ ನೀಡಬಹುದು ಎಂದು ಅವರು ತಿಳಿಸಿದ್ದಾರೆ.

0 Comments