Ticker

6/recent/ticker-posts

Ad Code

Responsive Advertisement

ಬಳ್ಳಾರಿಯಲ್ಲಿ ಸಂಭ್ರಮದ ಮಹಾಮಾನವತವಾದಿ ಶ್ರೀ ಬಸವೇಶ್ವರ ಜಯಂತ್ಯೋತ್ಸವ ಅನುಭವ ಮಂಟಪದ ಮೂಲಕ 'ಪ್ರಜಾಪ್ರಭುತ್ವ' ಜಗತ್ತಿಗೆ ಪರಿಚಯಿಸಿದ್ದು ಶ್ರೀ ಬಸವೇಶ್ವರರು

ಬಳ್ಳಾರಿ, ಮೇ 03: ಜಿಲ್ಲಾಡಳಿತ, ಜಿಪಂ,ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ಮಹಾಮಾನವತವಾದಿ ಶ್ರೀ ಬಸವೇಶ್ವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಅವರು ಮಾತನಾಡಿ,ಬಸವೇಶ್ವರರು ಕಾಯಕವೇ ಕೈಲಾಸ ಎಂದು ಹೇಳುತ್ತಾ ಮಾಡುವ ಕೆಲಸವನ್ನು ನಿಷ್ಠೆಯಿಂದ ಮತ್ತು ಶ್ರದ್ಧೆಯಿಂದ ಮಾಡುವಂತೆ ಹೇಳಿದ್ದು,ಅದರಂತೆ ನಾನು ನಡೆಯುತ್ತಿರುವುದಾಗಿ ತಿಳಿಸಿದರು.

ವೀರಶೈವ ಲಿಂಗಾಯತ ಸಮುದಾಯ ರಾಜ್ಯದ ಬಹುದೊಡ್ಡ ಸಮುದಾಯವಾಗಿದೆ ಎಂದು ಹೇಳಿದ ಅವರು ಬಳ್ಳಾರಿಯಲ್ಲಿ ಬಸವೇಶ್ವರರ ಮೇಡಿಕಲ್ ಕಾಲೇಜು ಅಗತ್ಯವಿದ್ದು,ಅದನ್ನು ವಿ.ವಿ ಸಂಘದವರು ಸ್ಥಾಪಿಸುತ್ತಾರೆ ಎನ್ನುವ ಭರವಸೆ ಇದೆ ಎಂದರು.

ಇನ್ನೂ ಒಂದೆರಡು ತಿಂಗಳಲ್ಲಿ ಬಳ್ಳಾರಿ ಜಿಲ್ಲೆಗೆ ಕೆಎಂಇಆರ್ಸಿಯ 13600ಕೋಟಿ ರೂ.ಹಣ ಬರಲಿದ್ದು, ಆ ಅನುದಾನದ ಮೂಲಕ ಜಿಲ್ಲೆಯ ಸಮಗ್ರ ಅಭಿವೃದ್ಧಿಯಾಗಲಿದೆ ಎಂದರು.

ಬಸವೇಶ್ವರ ವಚನಗಳು ಪ್ರತಿಯೊಬ್ಬರು ಅಧ್ಯಯನ ಮಾಡಬೇಕು ಮತ್ತು ಅವುಗಳಲ್ಲಿರುವ ಅಂಶಗಳನ್ನು ಅನುಸರಿಸುವ ಕೆಲಸ ಮಾಡಬೇಕು ಎಂದರು.

ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ ಅವರು ಮಾತನಾಡಿ,ಬಸವೇಶ್ವರರು ವಚನಗಳು ಇಂದಿಗೂ ಪ್ರಸ್ತುತ ಎಂದರು.

ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಇಡೀ ಜಗತ್ತಿಗೆ ಪರಿಚಯಿಸಿದ್ದ ಬಸವಣ್ಣನವರು ಎಂದು ಬಣ್ಣಿಸಿದರು.

ಮಹಾನಗರ ಪಾಲಿಕೆ ಮೇಯರ್ ಎಂ.ರಾಜೇಶ್ವರಿ ನಾಯ್ಡು, ವಿಧಾನಪರಿಷತ್ ಮಾಜಿ ಸದಸ್ಯರಾದ ಎನ್.ತಿಪ್ಪಣ್ಣ ಅವರು ಮಾತನಾಡಿದರು. 

ಕನ್ನಡ ಉಪನ್ಯಾಸಕ ಡಾ.ಗಾದೆಪ್ಪ ಅವರು ವಿಶೇಷ ಉಪನ್ಯಾಸ ನೀಡಿದರು.

ಇದಕ್ಕೂ ಮುಂಚೆ ನಗರದ ಎಚ್.ಆರ್.ಗವಿಯಪ್ಪ ವೃತ್ತದಲ್ಲಿರುವ ಶ್ರೀಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹನುಮಂತಪ್ಪ,ಬುಡಾ ಅಧ್ಯಕ್ಷ ಪಾಲನ್ನ,ಎಪಿಎಂಸಿ ಅಧ್ಯಕ್ಷ ಉಮೇಶ,ವಿಧಾನಪರಿಷತ್ ಮಾಜಿ ಸದಸ್ಯ ಎನ್.ತಿಪ್ಪಣ್ಣ, ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಜಿಪಂ ಸಿಇಒ ಜಿ.ಲಿಂಗಮೂರ್ತಿ, ಎಸ್ಪಿ ಸೈದುಲು ಅಡಾವತ್, ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್, ಸಹಾಯಕ ಆಯುಕ್ತ ಡಾ.ಆಕಾಶ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಇದ್ದರು.

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್ ಸ್ವಾಗತಿಸಿದರು. ಅಮಾತಿ ಬಸವರಾಜ ನಿರೂಪಿಸಿದರು.




 


Post a Comment

0 Comments

Ad Code

Responsive Advertisement