ಬೆಂಗಳೂರು: ಬಜೆಟ್ ಅನುಷ್ಠಾನಕ್ಕೆ ಮಾಡಲು ಸಭೆ ಮಾಡಿದ್ದೀರಾ?. ಚುನಾವಣೆ ಹತ್ತಿರದಲ್ಲೇ ಇರುವುದರಿಂದ ಪಕ್ಷದ ದೇಣಿಗೆ ಸಂಗ್ರಹ ಮಾಡಲು, ಕಮಿಷನ್ ಹೊಡೆಯಲು ಈ ಸಭೆಗಳನ್ನು ಮಾಡುತ್ತಿದ್ದೀರಿ ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.
800 ಕೋಟಿ ರೂ. ಏನಾಯಿತು?. ಹೊರಮಾವು ಪ್ರದೇಶಕ್ಕೆ ಮಂತ್ರಿ ಹೋಗಿ ಫೆಬ್ರವರಿಗೆ ಸರಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಹಾಗಾದರೆ ಕೆ ಆರ್ ಪುರ ಕ್ಷೇತ್ರಕ್ಕೆ ಕೊಟ್ಟ 800 ಕೋಟಿ ರೂ. ಹಣ ಏನಾಯಿತು? ಕೋಟ್ಯಂತರ ರೂಪಾಯಿ ಅನುದಾನ ತೆಗೆದುಕೊಂಡು ಹೋಗಿ ಏನು ಮಾಡಿದಿರಿ? ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನಿಸಿದರು.
Varthajala daily, Bengaluru

0 Comments