ಬೆಂಗಳೂರು: ದೊಡ್ಡ ದೊಡ್ಡ ಮುಖಂಡರು ಇಲ್ಲದೇ ಇದ್ದರೂ ಮಾನವೀಯತೆಯನ್ನು ಉಳಿಸಿಕೊಂಡ ಮುಖಂಡರು ಇದ್ದಾರೆ ನಮ್ಮ ಪಕ್ಷದಲ್ಲಿ. ದಾಸರಹಳ್ಳಿ ಶಾಸಕ ಮಂಜುನಾಥ್ ಅವರು ಒಂದಲ್ಲ ಒಂದು ರೀತಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಹೋರಾಟ ಮಾಡುತ್ತಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಕೊಟ್ಟ ಅನುದಾನದಲ್ಲಿ ಒಂದಿಷ್ಟು ಡೈವರ್ಟ್ ಮಾಡುವ ಕೆಲಸ ಮಾಡಿದ್ದರು. ಕ್ಷೇತ್ರದ ಜನರಿಗೆ ಕೊಡುವ ಪ್ರಾಮಾಣಿಕತೆ ಇಲ್ಲದೇ ಹೋಯ್ತು ಈ ಸರ್ಕಾರಕ್ಕೆ. ಕೋರ್ಟ್ ನಿಂದ ಆದೇಶ ತರಬೇಕಾಯ್ತು ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು.
Varthajala daily, Bengaluru
0 Comments