ಬಳ್ಳಾರಿ ಜೂನ್ 22. ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಖಾಸಗಿ ಕಾರ್ಯಕ್ರಮಕ್ಕಾಗಿ ಚಾಗನೂರು ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಜಮೀನಿನಲ್ಲಿ ಕೂಲಿಕಾರರು ಕೆಲಸ ಮಾಡುತ್ತಿರುವುದನ್ನು ಕಂಡು ಕಾರಿನಿಂದ ಕೆಳಗಿಳಿದ ಸಮಸ್ಯೆ ಆಲಿಸಿದರು. ಈ ಸಂಧರ್ಭದಲ್ಲಿ ಬಡ ಕೂಲಿಗಾರರಿಗೆ ಧನ ಸಹಾಯ ಮಾಡಿದರು. ಏನೇ ಸಮಸ್ಯೆ ಬಂದರೂ ನಿಮ್ಮ ಜೊತೆ ನಾನಿದ್ದೇನೆ ಎಂದು ಅಭಯ ನೀಡಿದರು.
ಈ ಸಂದರ್ಭದಲ್ಲಿ ಶಾಸಕರ ಆಪ್ತರಾದ ನಾಗರಾಜ್, ಗೋವರ್ಧನ್ ರೆಡ್ಡಿ, ಬಿ.ದುರುಗಣ್ಣ, ಮಹಾನಗರಪಾಲಿಕೆ ಸದಸ್ಯರುಗಳಾದ ಕೆ.ಹೊನ್ನಪ್ಪ, ಬಿ.ಆರ್.ಎಲ್ ಸೀನಾ, ನೂರ್ ಮಹಮ್ಮದ್ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಸಿಂಧುವಾಳ ಗಾದಿಲಿಂಗನಗೌಡ, ಯರ್ರಗುಡಿ ಮುದಿ ಮಲ್ಲಯ್ಯ, ಶ್ರೀನಾಥ್, ಗೋನಾಳ್ ನಾಗಭೂಷಣ ಗೌಡ, ಹಗರಿ ಗೋವಿಂದ, ಅನ್ವರ್ ಸೇರಿದಂತೆ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡರು, ರೈತರು ಹಾಗೂ ಕೂಲಿಕಾರರು ಉಪಸ್ಥಿತರಿದ್ದರು.
.jpg)
0 Comments