ಮಧುಗಿರಿ: ಪಟ್ಟಣದ ಏಕಶಿಲಾ ಬೆಟ್ಟದ ತಪ್ಪಲಿನಲ್ಲಿನ ಕೋಟೆ ಶ್ರೀ ಕೋದಂಡ ರಾಮ ಸ್ವಾಮಿ ದೇವಾಲಯದ ಮುಂಭಾಗ ಭಾರತೀಯ ಜನತಾ ಪಾರ್ಟಿ ಮಧುಗಿರಿ ಜಿಲ್ಲಾ ಹಾಗೂ ಮಂಡಲ ವತಿಯಿಂದ ಪತಂಜಲಿ ಯೋಗ ಶಿಕ್ಷಣ ಸಮಿತಿ ಸಹಯೋಗದೊಂದಿಗೆ ವಿಶ್ವಯೋಗ ದಿನಾಚರಣೆ ಅಂಗವಾಗಿ ಯೋಗ ಶಿಕ್ಷಕರಾದ ಗೀತಾ ನಾಗರಾಜು ಹಾಗೂ ನಾಗಭೂಷಣ್ ರವರ ಮಾರ್ಗದರ್ಶನದಲ್ಲಿ ಸಾಮೂಹಿಕ ಯೋಗ ಪ್ರದರ್ಶನ ನೀಡಲಾಯಿತು.
ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಕೆ.ಮಂಜುನಾಥ್, ಮಂಡಲ ಅಧ್ಯಕ್ಷ ಪಿ.ಎಲ್.ನರಸಿಂಹ ಮೂರ್ತಿ, ಜಿಲ್ಲಾ ಪ್ರಭಾರಿ ವಿಕಾಸ್ ಪುತ್ತೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಯಣ್ಣ, ರವಿ ಪಾವಗಡ, ತಿಮ್ಮಜ್ಜ, ಜಿಲ್ಲಾ ಕಾರ್ಯಲಾಯ ಕಾರ್ಯದರ್ಶಿ ಸುರೇಶ್.ಎಂ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಮು, ನಾಗೇಂದ್ರಪ್ಪ ಹಾಗೂ ವಿಧ್ಯಾರ್ಥಿಗಳು ಭಾಗಿಯಾಗಿದ್ದರು.
ವರದಿ:ನಾಗೇಶ್ ಜೀವಾ ಪುರವರ

0 Comments