Ticker

6/recent/ticker-posts

Ad Code

Responsive Advertisement

ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಆಗಮನ, ರಾಜ್ಯಪಾಲರಿಂದ ಸ್ವಾಗತ

ಬೆಂಗಳೂರು 08.07.2022: ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಎರಡು ದಿನಗಳ ಭೇಟಿಗಾಗಿ ಶುಕ್ರವಾರ  ಬೆಂಗಳೂರಿಗೆ ಆಗಮಿಸಿದರು. 


ಸಂಜೆ ವಿಶೇಷ ವಿಮಾನದಲ್ಲಿ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಶ್ರೀ ವೆಂಕಯ್ಯ ನಾಯ್ಡು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಸಂಸದರಾದ ಪಿ ಸಿ ಮೋಹನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. 

---- 
ರಾಜಭವನದಲ್ಲಿ ಮೈಸೂರು ಪೇಟ ತೊಡಿಸಿ ಉಪರಾಷ್ಟ್ರಪತಿಯನ್ನು ಸ್ವಾಗತಿಸಿದ ರಾಜ್ಯಪಾಲರು

ಬೆಂಗಳೂರು 08.07.2022: 
ಬೆಂಗಳೂರಿಗೆ ಆಗಮಿಸಿರುವ ಗೌರಾವನ್ವಿತ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು  ಅವರಿಗೆ ರಾಜಭವನದಲ್ಲಿ ಮೈಸೂರು ಪೇಟ ತೊಡಿಸಿ, ಹೂಗುಚ್ಚ ನೀಡುವ ಮೂಲಕ  ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ರಾಜಭವನದ ಅಧಿಕಾರಿಗಳು ಉಪಸ್ಥಿತರಿದ್ದರು. 

Post a Comment

0 Comments

Ad Code

Responsive Advertisement