ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರg ಸಂಘವು ಇದೇ ಭಾನುವಾರ ದಿನಾಂಕ ೧೭ರಂದು ಗುತ್ತಿಗೆದಾರರ ಸಮಾವೇಶ ಹಾಗೂ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡಿದೆ.
ರಾಜ್ಯಾಧ್ಯಕ್ಷ ಸಿ.ರಮೇಶ್ ತಂಡದ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಪದಾಧಿಕಾರಿಗಳು ಹಾಗೂ ವಿದ್ಯುತ್ ಗುತ್ತಿಗೆದಾರರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೆರವೇರಲಿದೆ.
ಇದೇ ಸಂದರ್ಭದಲ್ಲಿ ಸಂಘದ ಶತಮಾನೋತ್ಸವದ ಲಾಂಛನ ಹಾಗೂ ವೆಬ್ ಸೈಟ್ ಅನಾವರಣಗೊಳ್ಳಲಿದೆ. ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಗಳಾದ ಬಸವರಾಜು ಬೊಮ್ಮಾಯಿಯವರು ಹಾಗೂ ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ.ಸುನೀಲ್ ಕುಮಾರ್ರವರು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.





0 Comments