ಚಿಟ್ ಫಂಡ್ ಸೇವೆಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ಯಿಂದ ವಿನಾಯಿತಿ ನೀಡುವಂತೆ ಸರ್ಕಾರವನ್ನು ಆಗ್ರಹಿಸಲು ನಗರದ ಫ್ರೀಡಮ್ ಪಾರ್ಕ್ ನಲ್ಲಿಂದು ಪ್ರತಿಭಟನಾ ಸಭೆಯನ್ನು ಕೆಸಿಎ (ರಿ) ಅಧ್ಯಕ್ಷರಾದ ಎಸ್.ಬಸವಲಿಂಗಪ್ಪನವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಗೋವಿಂದನ್ ಕುಟ್ಟಿ, ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ಖಜಾಂಚಿ ವಿಜಯಕುಮಾರ್ ರವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ರಾಜ್ಯದ ನಾನಾ ಭಾಗಗಳಿಂದ ಆಗಮಿಸಿ, ಸರ್ಕಾರ ತಮ್ಮ ಬೇಡಿಕೆಯನ್ನು ಈಡೇರಿಸಬೇಕೆಂದು ಆಗ್ರಹಿಸಿದರು.

0 Comments