ಬೆಂಗಳೂರು, ಜುಲೈ 02 (ಕರ್ನಾಟಕ ವಾರ್ತೆ) : ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ “ಪ್ರಾಣಿಗಳ ದತ್ತು ಸ್ವೀಕಾರ ಯೋಜನೆ” ಅಡಿಯಲ್ಲಿ ಮೈಸೂರಿನ ವಿ.ಜೆ.ಮಿಂಚು ಅವರು ಮೈಸೂರು ಮೃಗಾಲಯದ ಪ್ರಾಣಿ ಪಕ್ಷಿಗಳನ್ನು ನಿಗಧಿಪಡಿಸಿರುವ ಶುಲ್ಕವನ್ನು ಪಾವತಿಸಿ, ನವಿಲು - 4 ನ್ನು ದತ್ತು ಸ್ವೀಕಾರ ಮಾಡಿದ್ದು, ವನ್ಯಪ್ರಾಣಿ ಸಂರಕ್ಷಣೆಯ ಸತ್ಕಾರ್ಯದಲ್ಲಿ ಭಾಗವಹಿಸಿರುವುದಕ್ಕಾಗಿ ಅವರನ್ನು ಮೈಸೂರು ಮೃಗಾಲಯವು ಅಭಿನಂದಿಸಿದೆ ಎಂದು ಅಧಿಕೃತ ಪರಕಟಣೆ ತಿಳಿಸಿದೆ.
ಕೊಡಗು ಜಿಲ್ಲೆ ದುಬಾರೆಯಲ್ಲಿನ ಸಾಕಾನೆ ಶಿಬಿರಕ್ಕೆ ಹಾಗೂ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಗೋಲ್ಡನ್ ಟೆಂಪಲ್ ಗೆ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್ ಮತ್ತು ಅವರ ಪತ್ನಿ ಅನಿತಾ ಗೆಹ್ಲೊಟ್ ಅವರು ಶನಿವಾರ ಭೇಟಿ ನೀಡಿದರು. ಈ ವೇಳೆ ಅಧಿಕಾರಿಗಳು ಉಪಸ್ಥಿತರಿದ್ದರು.
0 Comments