ಬೆಂಗಳೂರು: ರಾಜ್ಯಾದ್ಯಂತ ಎಲ್ಲ ಜಿಲ್ಲಾ ತಾಲ್ಲುಕು ಹಾಗು ರಾಜ್ಯಮಟ್ಟದಲ್ಲಿ ವಿವಿಧ ಇಲಾಖೆಗಳ ಕಛೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಸರಕಾರಿ ಕಛೇರಿಗಳಿಗೆ ಸಾರ್ವಜನಿಕರು ಅವರ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುವುದು ಸರ್ವೇ ಸಾಮಾನ್ಯವಾಗಿದ್ದು,
ಕೆಲವು ಖಾಸಗಿ ವ್ಯಕ್ತಿಗಳು ಸರಕಾರಿ ಕಛೇರಿಗಳಿಗೆ ಕಛೇರಿ ವೇಳೆಯಲ್ಲಿ ಬಂದು ಕಛೇರಿಯ ಫೋಟೊ/ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು ಹಾಗು ಇಂತಹ ಫೋಟೊ/ವಿಡಿಯೋಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಇಲಾಖೆ, ಸರಿಕಾರದ ಘನತೆಗೆ ಉಂಟಾಗುತ್ತಿರುವುದರಿ0ದ ರಾಜ್ಯ ಸರಕಾರದ ಎಲ್ಲಾ ಇಲಾಖೆಗಳ ಕಛೇರಿ ವೇಳೆಯಲ್ಲಿ ಅನುಮತಿಯಿಲ್ಲದೆ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೊ/ವಿಡಿಯೋ ಮಾಡದಂತೆ ನಿಷೇಧಿಸಿ ರಾಜ್ಯ ಸರಕಾರವು ಆದೇಶ ಹೊರಡಿಸಿದೆ.
Varthajala bilingual daily, Bengaluru

0 Comments