Ticker

6/recent/ticker-posts

Ad Code

Responsive Advertisement

*ಅತಿಕ್ರಮಣ ತೆರವು ಕಾರ್ಯಾಚರಣೆ: ಭೇದಭಾವದ ಪ್ರಶ್ನೆಯೇ ಇಲ್ಲ : ಸಿಎಂ ಬೊಮ್ಮಾಯಿ

ಬೆಂಗಳೂರು, ಸೆಪ್ಟೆಂಬರ್ 12: ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ  ಯಾವುದೇ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು  ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು  ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 

ರಾಜಕಾಲುವೆ ಮೇಲೆ ಕಟ್ಟಡ,ಮನೆ  ಕಟ್ಟಿರುವವರು, ಯಾರು ಕಾಲುವೆ ನೀರನ್ನು ಹರಿಸಲು ತೊಂದರೆ ಮಾಡಿದ್ದಾರೆ, ಕೆಲವರು  ರಾಜಕಾಲುವೆಯನ್ನು ಮುಚ್ಚಿದ್ದಾರೆ.  ಮಳೆ ನೀರು ಚರಂಡಿಗೆ ಅಡ್ಡಿಯಾಗಿದ್ದರೆ, ಅವುಗಳನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ ಎಂದರು. 

ಪ್ರವಾಹ ಬಂದಾಗ ಐಟಿ ಬಿಟಿಯವರು ಸೇರಿದಂತೆ ಎಲ್ಲರಿಗೂ ತೊಂದರೆಯಾಗಿದೆ, ಜನಸಾಮಾನ್ಯರು, ಕೆಳಹಂತದ ಮನೆಗಳಿಗೂ ತೊಂದರೆಯಾಗಿದೆ. ಇವುಗಳನ್ನು ತೆರೆವುಗೊಳಿಸುವ ಕಾರ್ಯವನ್ನು ಪೂರ್ಣಗೊಳಿ ಸಲಾಗುವುದು ಎಂದು ತಿಳಿಸಿದರು. 

ಹಲವಾರು ಪ್ರಕರಣಗಳು ನ್ಯಾಯಾಲಯದಲ್ಲಿ ದಾಖಲಾಗಿ ನಿರ್ದೇಶನ ಪಡೆಯಲಾಗಿದೆ. ನ್ಯಾಯಾಲಯದಲ್ಲಿಯೂ ಗಂಭೀರವಾಗಿ ಇವುಗಳ ಮಾಹಿತಿಯನ್ನು ನೀಡಲಾಗುವುದು. ನ್ಯಾಯಾಲಯವೂ ಪ್ರವಾಹದ ಪ್ರಕರಣದಲ್ಲಿ ನಿರ್ದೇಶನಗಳನ್ನು ನೀಡಿದೆ. ಈ ಬಾರಿ ದೊಡ್ಡ ಪ್ರಮಾಣದಲ್ಲಿ ಅತಿಕ್ರಮಣ ತೆರೆವುಗೊಳಿಸಲಾಗುವುದು ಎಂದರು. 

*ಪಿ.ಎಸ್.ಐ ನೇಮಕಾತಿ*

ಪಿ.ಎಸ್.ಐ ಅಕ್ರಮ ನೇಮಕಾತಿ ಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕರು ಮಾತನಾಡಿರುವ ವೀಡಿಯೊ  ಬಿಡುಗಡೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಆಡಿಯೋನೋ, ವೀಡಿಯೋನೋ ಗೊತ್ತಿಲ್ಲ. ಅದನ್ನು ಪರಿಶೀಲಿಸಲಾಗುವುದು. ಹಾಗೇನಾದರೂ ತಪ್ಪು ಕಂಡುಬಂದಲ್ಲಿ ತನಿಖೆಗೆ ಆದೇಶಿಸಲಾಗುವುದು ಎಂದರು.

Post a Comment

0 Comments

Ad Code

Responsive Advertisement