ಬೆಂಗಳೂರು : ಯಲಹಂಕದ ರೈಲು ಗಾಲಿ ಕಾರ್ಖಾನೆ ಆವರಣದಲ್ಲಿರುವ ನೌಕರರ ಮನರಂಜನಾ ಕೇಂದ್ರದಲ್ಲಿ ನಾಡಪ್ರಭು ಕೆಂಪೇಗೌಡ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ನಾಡಪ್ರಭು ಶ್ರೀ ಕೆಂಪೇಗೌಡರ 513 ನೇ ಜಯಂತಿ ಹಾಗೂ ಸಂಘದ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ವಿಶೇಷ ಸಾಧಕರಿಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿರುವ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿರವರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಯಲಹಂಕ ವಿಧಾನ ಸಭಾ ಕ್ಷೇತ್ರದ ಶಾಸಕರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ತಿರುಪತಿ ತಿರುಮಲ ದೇವಸ್ಥಾನದ
ಆಡಳಿತ ಮಂಡಳಿಯ ಸದಸ್ಯರಾದ ಎಸ್.ಆರ್.ವಿಶ್ವನಾಥ್, ವಿಶ್ವವಾಣಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ಡಾ. ವಾಣಿಶ್ರೀ ವಿಶ್ವನಾಥ್, ಸಂಘದ ಅಧ್ಯಕ್ಷ ಸಿ.ಎಸ್. ಶಿವರಾಮು ಮುಂತಾದ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.






0 Comments